NEWSಕೃಷಿ

ಲಾಕ್‍ಡೌನ್ ನಂತರ ರೈತರಿಗೆ ನೂತನ ಪ್ಯಾಕೇಜ್ ನಿರೀಕ್ಷೆ

ಕೋವಿಡ್ ನಿಯಂತ್ರಣ ಜಿಲ್ಲಾಡಳಿತಕ್ಕೆ ಅಭಿನಂದನೆ l ಸಂಸದ ಶಿವಕುಮಾರ ಉದಾಸಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ಲಾಕ್‍ಡೌನ್‍ನಿಂದ ತೊಂದರೆಗೊಳಗಾದ ರೈತಾಪಿ ಜನರಿಗೆ ಹೊಸ ಪ್ಯಾಕೇಜ್ ಘೋಷಣೆ ಕುರಿತಂತೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯಲಾಗಿದೆ. ಮೇ 3ರ ನಂತರ ನೂತನ ಪ್ಯಾಕೇಜ್ ಘೋಷಣೆ ನಿರೀಕ್ಷಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ  ತಿಳಿಸಿದರು.

ಹಾವೇರಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಗೋವಿನಜೋಳ ಬೆಂಬಲಬೆಲೆಯಡಿ ಖರೀದಿಮಾಡುವ ಕುರಿತಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಗೋವಿನಜೋಳ ಹೆಚ್ಚು ಬೆಳೆಯುವ ರಾಜ್ಯದ ಹಾವೇರಿ, ದಾವಣಗೆರೆ, ಗದಗ, ಧಾರವಾಡ, ಶಿವಮೊಗ್ಗ ಜಿಲ್ಲೆಗಳ ರೈತರಿಂದ ಬೆಂಬಲಬೆಲೆಯಡಿ ಖರೀದಿಗೆ ವಿಶೇಷ ಪ್ಯಾಕೇಜ್‍ಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಲಾಕ್‍ಡೌನ್ ಅವಧಿಯಲ್ಲಿ ಉದ್ಯೋಗ ಅರಸಿ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಹಾವೇರಿ ಜಿಲ್ಲೆಯಲ್ಲಿ   ಉಳಿದಿರುವ ಕಾರ್ಮಿಕರು ಹಾಗೂ ಹಾವೇರಿ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಉಳಿದುಕೊಂಡಿರುವ ಕಾರ್ಮಿಕರು ತಮ್ಮ ತಮ್ಮ ಸ್ವಂತ ಗ್ರಾಮಕ್ಕೆ ತೆರಳುವ ಅಪೇಕ್ಷೆ ಹೊಂದಿದ್ದಾರೆ. ಮೇ 3ರ ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಅವರವರ ಗ್ರಾಮಗಳಿಗೆ ಕಳುಹಿಸುವ ಕುರಿತಂತೆ ಚರ್ಚಿಸಲಾಗುತ್ತದೆ.  ರೈಲು, ಬಸ್ಸುಗಳಲ್ಲಿ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆಮಾಡಿ ಅವರವರ ಊರಿಗೆ ಕಳುಹಿಸುವುದು, ತಮ್ಮ ಗ್ರಾಮ ತಲುಪಿದ ಮೇಲೆ ನಿಯಮಾನುಸಾರ ಗೃಹಪ್ರತ್ಯೇಕತೆಯಲ್ಲಿ ಇರಿಸುವ ಕುರಿತಂತೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

ರೈತರ ಸಾಲದ ಕಂತುಗಳನ್ನು ಮೂರು ತಿಂಗಳು ಮುಂದೂಡುವ ಕುರಿತಂತೆ ಈಗಾಗಲೇ ಚಚಿಸಲಾಗಿದೆ. ಲಾಕ್‍ಡೌನ್‍ನಿಂದ ಮೆಣಸಿನಕಾಯಿ ವ್ಯಾಪಾರಿಗಳು, ದಲ್ಲಾಳಿಗಳಿಗೆ ಉಂಟಾಗಿರುವ ತೊಂದರೆ ಕುರಿತಂತೆ ಈಗಾಗಲೇ ಚರ್ಚಿಸಲಾಗಿದೆ. ಬ್ಯಾಂಕ್‍ಗಳೊಂದಿಗೆ ಚರ್ಚಿಸಿ ಓಓಡಿ ನೀಡುವಂತೆ ಸಲಹೆ ಮಾಡಲಾಗಿದೆ. ಬ್ಯಾಡಗಿ ಮಾರುಕಟ್ಟೆಗೆ ಹೊರರಾಜ್ಯಗಳಿಂದ ಬರುವ ಚಾಲಕರು, ಹಮಾಲರಿಗೆ ವೈದ್ಯಕೀಯ ತಪಾಸಣೆಯನ್ನು ತೀವ್ರಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ಪಂಚಾಯತ್ ಸದಸ್ಯ ಸಿದ್ಧರಾಜ ಕಲಕೋಟಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...