CrimeNEWSನಮ್ಮರಾಜ್ಯ

ಲೈಂಗಿಕ ಕಿರುಕುಳ ನೀಡಿ ಓಡುತ್ತಿದ್ದವನ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ತರಕಾರಿ ತರಲು ಮನೆಯಿಂದ ಹೊರ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಕಾಮುಕನ ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ಆತ ಈಗ ಕಂಬಿ ಎಣಿಸುತ್ತಿದ್ದಾನೆ.

ನಡೆದ ಘಟನೆ: ಏಪ್ರಿಲ್‌ 25ರಂದು ತರಕಾರಿ ತರುವ ಸಲುವಾಗಿ ಮನೆಯಿಂದ ಹೊರ ಬರುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕ ಆಕೆಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಆದರೆ ಆತನನನ್ನು ಯುವತಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

25 ವರ್ಷದ ಯುವತಿ ತರಕಾರಿ ತರಲು ಮನೆಯಿಂದ ಒಂಟಿಯಾಗಿ ಹೋಗುತ್ತಿದ್ದರು. ಆಗ ಆರೋಪಿ ಯುವಕ ಯುವತಿಯ ಬಳಿ ಬಂದು ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈವೇಳೆ ರಕ್ಷಣೆ ಗಾಗಿ ಆಕೆ ಕೂಗಾಡಿದ್ದಾರೆ. ಅಷ್ಟರಲ್ಲಿ ಜನ ಕೇಳಿಸಿಕೊಂಡು ಸಹಾಯಕ್ಕೆ ಧಾವಿಸುತ್ತಿದ್ದನ್ನು ತಿಳಿದ ಆರೋಪಿ ಓಡಿಹೋಗಲು ಶುರುಮಾಡಿದ್ದಾನೆ. ಈ ವೇಳೆ ಆಕೆಯಿಂದ ಬಿಡಿಸಿಕೊಳ್ಳಲು ಆಕೆಯ ಕೈಯನ್ನು ಕಚ್ಚಿಬಿಡಿಸಿಕೊಂಡು ಓಡಿದ್ದಾನೆ. ಆದರೂ ಆತನ ಬೆನ್ನಟ್ಟಿದ ಯುವತಿ ತಾನೇ ಆರೋಪಿಯನ್ನು ಹಿಡಿದುಕೊಂಡು ಮುಖ್ಯರಸ್ತೆಗೆ ಎಳೆದು ತಂದಿದ್ದಾರೆ. ಅಷ್ಟರಲ್ಲೇ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ನಂತರ ಸ್ಥಳೀಯರು ಆತನನ್ನು ಥಳಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಟನ್‌ ಪೇಟೆಯ ಸಿದ್ದಾರ್ಥ ನಗರದ ನಿವಾಸಿ ಮುಹಮ್ಮದ್ ಫಯಾಝ್ (21) ಬಂಧಿತ ಆರೋಪಿಯಾಗಿದ್ದಾನೆ.

ಈತ ಪ್ಲಂಬರ್ ಕೆಲಸ ಮಾಡುತ್ತಿದ್ದ, ಅಲ್ಲದೇ ಸರ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಸೇರಿ ಹಲವು ಠಾಣೆಗಳಲ್ಲಿ ಹಲವು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ