CrimeNEWSದೇಶ-ವಿದೇಶ

ವಾಕಿಂಗ್ ಮಾಡುತ್ತಿದ್ದ ಎಎಸ್‌ಐ ಒಬ್ಬರ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಕರ್ನಾಲ್: ಹರಿಯಾಣದ ಕರ್ನಾಲ್​​ನಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) ಒಬ್ಬರ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ.

ಯಮುನಾನಗರದ ಕ್ರೈಂಬ್ರಾಂಚ್​ ಎಎಸ್​ಐ ಸಂಜೀವ್ ಕುಮಾರ್ ಎಂಬುವರೆ ಪಾತಕಿಗಳು ಹಾರಿದ ಗುಂಡಿಗೆ ಬಲಿಯಾದವರು. ಪೊಲೀಸ್ ಅಧಿಕಾರಿಯ ಮನೆಯ ಸಮೀಪವೇ ಕೊಲೆ ಮಾಡಲಾಗಿದೆ. ವಾಕಿಂಗ್ ಮಾಡುತ್ತಿದ್ದಾಗ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಬಳಿಕ ಪರಾರಿಯಾಗಿದ್ದಾರೆ.

ಸಂಜೀವ್ ಹರಿಯಾಣ ಪೊಲೀಸ್ ಠಾಣೆಯ ಎಎಸ್‌ಐಯಾಗಿದ್ದು, ಯಮುನಾಗರದ ರಾಜ್ಯ ಅಪರಾಧ ವಿಭಾಗದಲ್ಲಿ ನೇಮಕಗೊಂಡಿದ್ದರು.

ಪಾತಕಿಗಳು ಎಸ್‌ಐ ಹಣೆಯ ಮತ್ತು ಸೊಂಟಕ್ಕೆ ಗುಂಡು ಹೊಡೆದಿದ್ದು ಆ ಗುಂಡುಗಳು ಹೊಕ್ಕಿದ್ದರಿಂದ ಗಂಭೀರ ಸ್ಥಿತಿಯಲ್ಲಿದ್ದ ಸಂಜೀವ್​​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದರು.

ಕೃತ್ಯದ ಬಳಿಕ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳ ತಂಡ ಘಟನಾ ಸ್ಥಳ ತಲುಪಿದೆ. ಅಲ್ಲಿ ಕೆಲವು ಬುಲೆಟ್ ಶೆಲ್​ಗಳು ಬಿದ್ದಿದ್ದು ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತ ಸುದ್ದಿ ತಿಳಿದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದು, ದುಃಖದ ಮಡುವಿನಲ್ಲಿ ಗೋಳಾಡುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ