NEWS

ವೈಕುಂಠ ಏಕಾದಶಿ: ಶ್ರೀ ಲಕ್ಷ್ಮೀ ವೆಂಕಟ ರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ವೈಕುಂಠ ಏಕಾದಶಿ (Vaikuntha Ekadashi) ಅಂಗವಾಗಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ- (Special Puja) ಪ್ರಾರ್ಥನೆ ಹಾಗೂ ಪ್ರಸಾದ ವಿತರಣಾ ಕಾರ್ಯಕ್ರಮ ನೆರವೇರಿತು.

ಪಟ್ಟಣದ ಚನ್ನಪಟ್ಟಣ ಬೀದಿಯ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಸೇರಿದಂತೆ ನಗರದ ಬಹುತೇಕ ವಿಷ್ಣು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ-ಹೋಮ-ಹವನಾದಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಚನ್ನಪಟ್ಟಣ ಬೀದಿಯ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಸಾಧಾರಣವಾಗಿ ವೈಕುಂಠ ಏಕಾದಶಿಯಂದು ನಸುಕಿನ ಜಾವವೇ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಆದರೆ, ಸರ್ಕಾರದ ಕೋವಿಡ್-19 ಸಾಂಕ್ರಾಮಿಕದ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚನ್ನಪಟ್ಟಣ ಬೀದಿಯ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯಗಳಲ್ಲಿ ಬೆಳಗಿನ ಜಾವ ಭಕ್ತಾದಿಗಳಿಗೆ ದರ್ಶನಾವಕಾಶ ನೀಡಿ ಪ್ರಸಾದ ವಿತರಿಸಮಾಯಿತು.

ಈ ಹಿಂದಿನ ವರ್ಷಗಳಲ್ಲಿ ದೇವಾಲಯಗಳ ಮುಂದೆ ಮೈಲುದ್ದದ ಸಾಲುಗಳು ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮಗಳು ಕಂಡುಬರುತ್ತಿದ್ದವು. ಆದರೆ, ಈ ಬಾರಿ ಎಂದಿನ ಜನದಟ್ಟಣೆ ಅಷ್ಟಾಗಿ ಕಾಣಲಿಲ್ಲ. ಕೋವಿಡ್ ಮಾರ್ಗಸೂಚಿ ಸ್ಥಳೀಯರು ಮಾತ್ರ ಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ ಪ್ರಚಾರ ಇಲ್ಲದ ಕಾರಣ ಸಾರ್ವಜನಿಕರು ಹೆಚ್ಚಾಗಿ ದೇವಾಲಯದಲ್ಲಿ ದರ್ಶನಕ್ಕೆ ಬಂದಿರಲಿಲ್ಲ.

ದೇವಸ್ಥಾನ ಮಂಡಳಿಯವರು ಮಾತ್ರ ವೈಕುಂಠ ದ್ವಾರದ ಮೂಲಕ ದೇವಾಲಯ ಪ್ರವೇಶಿಸಿ ಪೂಜೆ-ಪ್ರಾರ್ಥನೆ ನೆರವೇರಿಸಿದರು. ಪ್ರತಿ ವರ್ಷ ಸಾರ್ವಜನಿಕರು ಹಾಗೂ ಭಕ್ತಾದಿಗಳು ವೈಕುಂಠ ಏಕಾದಶಿಯಂದು ವೈಕುಂಠದ್ವಾರ ತೆರೆಯುತ್ತದೆ. ಅಂದು ವಿಷ್ಣು ದೇವರ ದರ್ಶನ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ.

ಈ ಸಂದರ್ಭದಲ್ಲಿ ತಾಲೂಕು ಶ್ರೀ ಕೃಷ್ಣ ಯಾದವರ ಸಂಘದ ಅಧ್ಯಕ್ಷ ಪಿ.ಡಿ.ಪ್ರಸನ್ನ, ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಸತ್ಯನಾರಾಯಣ, ಪುರೋಹಿತ ಪದ್ಮರಾಜ್, ಮುಖಂಡರಾದ ಸುರೇಶ್, ಮಹದೇವ್, ರವಿ, ತೇಜಸ್, ಕೃಷ್ಣಮೂರ್ತಿ, ಧನಪಾಲ್, ಶರಣ್, ರವಿ, ಪಲ್ಲಿ, ಮಿಡಿ ಸೇರಿದಂತೆ ಭಕ್ರಾದಿಗಳು ಹಾಗೂ ಸಾರ್ವಜನಿಕರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು