CrimeNEWSನಮ್ಮಜಿಲ್ಲೆ

ವಾಕ್‌ ಮಾಡುತ್ತಿದ್ದ ಮಹಿಳೆ ಮೇಲೆ ಗುಂಪಾಗಿ ಬಂದ ಬೀದಿನಾಯಿಗಳು ದಾಳಿ: ವೃದ್ಧೆ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗುಂಪಾಗಿ ಬಂದ ಬೀದಿ ನಾಯಿಗಳು ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದು, ನಾಯಿಗಳ ದಾಳಿಗೆ ಆ ಮಹಿಳೆ ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಇಂದು ನಡೆದಿದೆ.

ಸುಮಾರು 60 ವರ್ಷದ ವೃದ್ಧೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ವೇಳೆ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಒದೇ ಸಮನೆ ಎರಗಿ ದಾಳಿ ನಡೆಸಿವೆ. ಘಟನೆಯ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗವನ್ನು ಕಚ್ಚಿ ಕಚ್ಚಿ ಛಿದ್ರ ಛಿದ್ರಗೊಲೀಸಿವೆ.

ಸ್ಥಳೀಯರು ಕೂಡಲೇ ನಾಯಿಗಳನ್ನು ಓಡಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನು ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು.

ಮಗಳ ಮನೆಗೆ ಬಂದಿದೆ ಆಕೆ ಇಂದು ಮುಂಜಾನೆ ಅಂದರೆ ಬುಧವಾರ ಬೆಳಗ್ಗೆ ವಾಕ್ ಮಾಡುವಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಸದ್ಯ ಮಹಿಳೆ ಮೃತದೇಹವನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಹಿಂದೆಯೂ ಇದೇ ಕ್ಯಾಂಪಸ್‌ನಲ್ಲಿ ನಾಲ್ಕೈದು ಜನರ ಮೇಲೆ ನಾಯಿಗಳು ದಾಳಿ ಮಾಡಿದ್ದವು ಎಂದು ತಿಳಿದು ಬಂದಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ