NEWSಸಂಸ್ಕೃತಿ

ವಿಜೃಂಭಣೆಯಿಂದ ಜರುಗಿದ ದೊಡ್ಡಮ್ಮತಾಯಿ ರಥೋತ್ಸವ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಕೊತ್ತವಳ್ಳಿ ಗ್ರಾಮದ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ರಥವು ಶಿಥಿಲಗೊಂದಡಿದ್ದ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಜಾತ್ರಾಮಹೋತ್ಸವವು ಸ್ಥಗಿತಗೊಂಡಿತ್ತು. ಗ್ರಾಮಸ್ಥರು, ದಾನಿಗಳ ನೆರವಿನಿಂದ ರಥವನ್ನು ನೂತನವಾಗಿ ನಿರ್ಮಿಸಿದ್ದಾರೆ.

ಹೀಗಾಗಿ ಶ್ರೀ ದೊಡ್ಡಮ್ಮತಾಯಿ ಜಾತ್ರಾ ಮಹೋತ್ಸವನ್ನು ಹೋಮ-ಹವನಗಳಿಂದ ನೂತನ ರಥಕ್ಕೆ ಪೂಜೆ ಸಲ್ಲಿಸಿ ಶುಕ್ರವಾರ ಸಂಜೆ ನಂತರ ದೇವರ ಉತ್ಸವ ಮೂರ್ತಿಯನ್ನು ನೂತನ ರಥದ ಮೇಲೆ ಪ್ರತಿಷ್ಠಾಪಿಸಿ ರಥ ಎಳೆಯುವ ಮೂಲಕ ಭಕ್ತಾದಿಗಳು ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಜಾತ್ರಾ ಮಹೋತ್ಸವಕ್ಕೆ ಕೊತ್ತವಳ್ಳಿಕೊಪ್ಪಲು, ವಡ್ಡರಹಳ್ಳಿ, ಮಾಳೆಗೌಡನಕೊಪ್ಪಲು, ಹುಚ್ಚೇಗೌಡನಕೊಪ್ಪಲು, ಕಗ್ಲಿಕೊಪ್ಪಲು, ಕಳ್ಳಿಕೊಪ್ಪಲು ಸೇರಿದಂತೆ ತಾಲ್ಲೂಕಿನ ನಾನಾ ಭಾಗಗಳಿಂದ ಭಕ್ತರು ಆಗಮಿಸಿದರು.

ಗ್ರಾಮದ ಯಜಮಾನ ಹಾಗೂ ಜಿ.ಪಂ.ಮಾಜಿ ಉಪಾಧ್ಯಕ್ಷ ವಿ.ಜಿ.ಅಪ್ಪಾಜಿಗೌಡ, ಯಜಮಾನರಾದ ಹೊಲದಪ್ಪ, ಅಶೋಕ, ಕುಂಡೇಗೌಡ, ಕಾಳೇಗೌಡ, ಜವರೇಗೌಡ, ಕಾಗ್ರೆಸ್ ಮುಖಂಡ ನಿತಿನ್‌ ವೆಂಕಟೇಶ್ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ