CrimeNEWSನಮ್ಮರಾಜ್ಯ

“ವಿಜಯಪಥ ಇಂಪ್ಯಾಕ್ಟ್‌”:  ನಕಲಿ ಬಸ್‌ಪಾಸ್‌ನಲ್ಲೇ 23ವರ್ಷಗಳು ಓಡಾಡಿದ್ದ  ಹೋಂ ಗಾರ್ಡ್‌ ಬಂಧಿಸಿದ KSRTC ಎಸ್‌&ವಿ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಕಲಿ ಬಸ್‌ ಪಾಸ್‌ ಇಟ್ಟುಕೊಂಡು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಕಳೆದ 23 ವರ್ಷಗಳಿಂದಲೂ ಉಚಿತವಾಗಿ ಓಡಾಡುತ್ತಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ (ಹೋಂ ಗಾರ್ಡ್‌) ಮುನಿರಾಜು ಎಂಬಾತನ ಬಗ್ಗೆ ಬುಧವಾರ ವಿಜಯಪಥದಲ್ಲಿ ವರದಿ ಮಾಡಲಾಗಿತ್ತು.

KSRTC: ಗೃಹ ರಕ್ಷಕ ದಳದ ಸಿಬ್ಬಂದಿಗೆ 54 ವರ್ಷಗಳವರೆಗೂ ಮಾನ್ಯತೆ ಇರುವ ಬಸ್‌ಪಾಸ್‌ ವಿತರಣೆ!!? 2001ರಿಂದ ಫ್ರೀಯಾಗಿ ಪ್ರಯಾಣಿಸುತ್ತಿರುವ ಭೂಪ! ಎಂಬ ಶೀರ್ಷಿಕೆಯಡಿ ವಿಜಯಪಥದಲ್ಲಿ ವರದಿ ಬರುತ್ತಿದಂತೆ ಅಲರ್ಟ್‌ ಆದ ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ಹೋಂ ಗಾರ್ಡ್‌ನ ಪತ್ತೆ ಕಾರ್ಯದಲ್ಲಿ ನಿರತರಾಗಿದ ಕೇವಲ 24 ಗಂಟೆಯೊಳಗೆ ಆತನನ್ನು ಹಿಡಿದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ವರದಿ ಆಧರಿಸಿ ಬುಧವಾರ ರಾತ್ರಿಯಿಂದ ಆತ ಎಲ್ಲಿದ್ದಾನೆ ಎಂಬುದರ ಬಗ್ಗೆ ಶೋಧ ನಡೆಸುತ್ತಿದ್ದರು. ಇಂದು ಅಂದರೆ ಗುರುವಾರ ಮುಂಜಾನೆ 6 ಗಂಟೆ ವೇಳೆಗೆ ಆತ ಮೆಜೆಸ್ಟಿಕ್ ತುಳಸಿ ಪಾರ್ಕ್ ಹತ್ತಿರ ಗೃಹರಕ್ಷಕ ದಳದ ಪೆರೇಡ್‌ ಬಳಿ ಬಂದಾಗ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣದ ಭದ್ರತಾ ಮತ್ತು ಜಾಗೃತಾಧಿಕಾರಿಗಳು ಹಿಡಿದು ತಂದಿದ್ದಾರೆ.

ಬಳಿಕ ವಿಚಾರಣೆ ನಡೆಸಿದ್ದು ಆತ ನಿನ್ನೆಯೇ ಪಾಸ್‌ಅನ್ನು ನಿನ್ನೆಯೇ ಯಾರೋ ಕೆ.ಆರ್.ಮಾರ್ಕೆಟ್‌ನಲ್ಲಿ ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೆ ಮಾನಸಿಕ ಅಸ್ವಸ್ಥನಂತೆ ನಟಿಸುತ್ತ ಯಾವುದೇ ಮಾಹಿತಿಯನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಸಾರಿಗೆ ಸಂಸ್ಥೆ ಅಧಿಕಾರಿಗಳು ಕೂಡ ವಿವಿ ಪುರಂ ಪೊಲೀಸ್ ಠಾಣೆಗೆ ಆತನನ್ನು ಕರೆದುಕೊಂಡು ಹೋಗಿದ್ದು, ಪಾಸ್ ಕಿತ್ತುಕೊಂಡು ಹೋಗಿರುವ ಬಗ್ಗೆ ಕೆ.ಆರ್.ಮಾರ್ಕೆಟ್‌ನಲ್ಲಿ ಸ್ಥಳ ಪರಿಶೀಲನೆ ಮಾಡಿ ಮಾಹಿತಿ ಪಡೆದಿದ್ದಾರೆ. ಮತ್ತೆ ಮುನಿರಾಜುವಿನ ಸ್ವಂತ ಊರಾದ ಕೋಲಾರದ ಶ್ರೀನಿವಾಸಪುರ ತಾಲೂಕು, ರೋಣೂರು ಹೋಬಳಿಯ ಕೊಟ್ರುಗುಳಿ ಗ್ರಾಮಕ್ಕೂ ಕೂಡ ಸಂಸ್ಥೆಯ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಈ ವೇಳೆ ಮುನಿರಾಜು ಪತ್ನಿ ಮತ್ತು ಮಕ್ಕಳ ವಿಚಾರಿಸಿದ್ದಾರೆ. ಅವರ ಹತ್ತಿರ ಪಾಸ್‌ ಇತ್ತು ಎಂದು ಹೇಳಿದ್ದಾರೆ. ಈ ಎಲ್ಲ ಬಳವಳಿಗೆಯ ಮಧ್ಯೆಯೇ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಆರೋಪಿ ಮುನಿರಾಜುವನ್ನು ಒಪ್ಪಿಸಿ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ದೂರು ನೀಡಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ