NEWSನಮ್ಮರಾಜ್ಯಲೇಖನಗಳು

ವಾಟ್ಸ್‌ಆಪ್‌ನಲ್ಲಿ ಇನ್ನು ಮುಂದೆ ಕಾಲ್​ ಶೆಡ್ಯೂಲ್​ ಮಾಡಿಯೂ ಇಟ್ಟುಕೊಳ್ಳಬಹುದು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಅಲ್ಪಸ್ವಲ್ಪ ಓದು ಬರಹ ಬರುವವರು ಸೇರಿದಂತೆ ಎಲ್ಲರನ್ನು ತನ್ನತ್ತ ಸೆಳೆದುಕೊಂಡಿರುವ ಜನಪ್ರಿ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆಪ್​ ಇತ್ತೀಚೆಗಂತೂ ಹೊಸ ಫೀಚರ್ಸ್​ಗಳನ್ನು ಪರಿಚಯಿಸುವ ಮೂಲಕ ಇತರ ಸಾಮಾಜಿಕ ಜಾಲತಾಣಗಳನ್ನು ಹಿಂದಿಕ್ಕುವುದರಲ್ಲಿ ಸದಾ ಮುಂದಿದೆ ಎಂಬುದನ್ನು ತೋರಿಸುತ್ತಲೇ ಇದೆ.

ತನ್ನ ಬಳಕೆದಾರರಿಗಾಗಿ ಕಳೆದ ವರ್ಷ ಹಲವಾರು ಫೀಚರ್ಸ್​​ಗಳನ್ನು ಹೊರತಂದಿದ್ದಲ್ಲೆ ಈಗ ಮತ್ತೆ ಅದೇ ರೀತಿಯಲ್ಲಿ 2023ರಲ್ಲೂ ಹಲವಾರು ನವೀಕರಣಗಳನ್ನು ಮಾಡುತ್ತಿದ್ದು, ಈ ವರ್ಷದ ಆರಂಭದಿಂದಲೇ WhatsApp ತನ್ನಲ್ಲಿನ ಕಾರ್ಯವೈಖರಿಯಲ್ಲಿ ಬದಲಾವಣೆಯನ್ನು ತರುತ್ತಲೇ ಇದೆ.

ಕೆಲದಿನಗಳ ಹಿಂದಷ್ಟೇ ವಾಟ್ಸ್‌ಆಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಶೇರ್ ಮಾಡುವ ಫೀಚರ್ ಬಿಡುಗಡೆ ಮಾಡಿತ್ತು. ತದನಂತರದಲ್ಲಿ ಬ್ಲಾಕ್​ ಶಾರ್ಟ್​ಕಟ್ (Block Shortcut)​ ಮಾಡುವ ಫೀಚರ್ ಪರಿಚಯಿಸಿತ್ತು. ಇದೀಗ ಮತ್ತೆ ಹೊ ಅಪ್ಡೇಟ್​ ಬಿಡುಗಡೆ ಮಾಡಿದೆ.

ವಾಟ್ಸ್‌ಆಪ್​ ಸದ್ಯ ಪರಿಚಯಿಸುತ್ತಿರುವ ಈ ಫೀಚರ್ ಇದುವರೆಗೆ ಬೇರೆ ಯಾವುದೇ ಅಪ್ಲಿಕೇಶನ್​ಗಳಲ್ಲೂ ಇಲ್ಲ. ಹೀಗಾಗಿ ಈ ಪರಿಚಯಿಸುತ್ತಿರುವ ಈ ಅಪ್ಲಿಕೇಶನ್‌ನಿಂದಾಗಿ ಇನ್ಮುಂದೆ ವಾಟ್ಸ್‌ಆಪ್​ನಲ್ಲಿ ಕಾಲ್​ ಶೆಡ್ಯೂಲ್​ ಮಾಡಿಯೂ ಇಟ್ಟುಕೊಳ್ಳಬಹುದಾಗಿದೆಯಂತೆ.

ವಾಟ್ಸ್‌ಆಪ್‌ನಲ್ಲಿ ಈಗಾಗಲೇ ವಾಯ್ಸ್‌ ಹಾಗೂ ವಿಡಿಯೋ ಕರೆ ಮಾಡಲು ಅವಕಾಶ ನೀಡಲಾಗಿದೆ. ಅದಾಗ್ಯೂ ಈ ವಿಭಾಗದಲ್ಲಿ ಇನ್ನಷ್ಟು ಹೊಸ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿರುವ ವಾಟ್ಸ್‌ಆಪ್ ಬಳಕೆದಾರರಿಗೆ ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಆಯ್ಕೆಯ ಫೀಚರ್ಸ್‌ ನೀಡುವಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿದುಬಂದಿದೆ.

ಈ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ಈ ಮೂಲಕ ಬೇಕಾದವರ ಜತೆಗೆ ಸಮಯಕ್ಕಿಂತ ಮುಂಚಿತವಾಗಿ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಕರೆಯನ್ನು ಯೋಜಿಸಬಹುದಾಗಿದೆ. ಈ ಮೂಲಕ ಇನ್ಮುಂದೆ ಬಳಕೆದಾರರು ಯಾವುದೇ ಕಾಲ್​ಗಳನ್ನು ವಾಟ್ಸ್‌ಆಪ್​ನಲ್ಲಿ ಮಿಸ್​ ಮಾಡಿಕೊಳ್ಳುವುದಿಲ್ಲ ಎಂದು ಕಂಪೆನಿ ಹೇಳಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್