NEWSಕೃಷಿನಮ್ಮಜಿಲ್ಲೆ

ವೃತ್ತಿ ಒತ್ತಡದ ನಡುವೆಯೂ ಟೊಮ್ಯಾಟೋ ಬೆಳೆದು ಲಕ್ಷ ಲಕ್ಷ ಹಣ ಗಳಿಸಿದ ಪೊಲೀಸಪ್ಪ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಟೊಮ್ಯಾಟೋ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಖರೀದಿ ಮಾಡೋದಂತೂ ದೂರದ ಮಾತಾಗಿಬಿಟ್ಟಿದೆ. ಈ ಬೆಲೆ ಏರಿಕೆ ಬೇಡಿಕೆ ಮಾತ್ರ ತಗ್ಗಿಲ್ಲ. ಇದರ ಲಾಭದಲ್ಲಿ ಭರ್ಜರಿಯಾಗಿ ಟೊಮ್ಯಾಟೋ ಬೆಳೆದ ಪೊಲೀಸಪ್ಪನೊಬ್ಬ ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ.

ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ಬೇಲೂರು ತಾಲೂಕಿನ ಹಳೆಬೀಡು ಹೋಬಳಿ ಬಸ್ತಿಹಳ್ಳಿ ಗ್ರಾಮದ ಬೈರೇಶ್ ಸದ್ಯ ಟೊಮ್ಯಾಟೋವನ್ನು ಒಂದು ಎಕರೆ 6 ಗುಂಟೆಯಲ್ಲಿ ಬೆಳೆದು, ಈಗಾಗಲೇ 20 ಲಕ್ಷ ರೂ. ಆದಾಯ ಗಳಿಸಿದ್ದಾರೆ.

ಈಗಾಗಲೇ ಸಾವಿರ ಬಾಕ್ಸ್​ ಟೊಮ್ಯಾಟೋ ಮಾರಿರುವ ಬೈರೇಶ್​ 20 ಲಕ್ಷ ರೂ. ಆದಾಯ ಗಳಿಸಿದ್ದಾರೆ. ಇನ್ನೂ ಸಾವಿರ ಬಾಕ್ಸ್ ಟೊಮ್ಯಾಟೋ ಮಾರುವ ನಿರೀಕ್ಷೆಯಲ್ಲಿದ್ದಾರೆ.

ಕಳ್ಳರ ಕಾಟ ತಪ್ಪಿಲ್ಲ: ಸರ್ಕಾರಿ ಕೆಲಸದ ಒತ್ತಡದ ನಡುವೆಯೂ ಒಳ್ಳೆಯ ಕೃಷಿ ಮಾಡಿ ಲಕ್ಷಾಂತರ ರೂಪಾಯಿಯ ಲಾಭವನ್ನು ಬೈರೇಶ್ ಪಡೆದಿದ್ದಾರೆ. ಆದರೆ, ಸ್ವತಃ ಪೊಲೀಸ್ ಪೇದೆಯೇ ತಮ್ಮ ಹೊಲದಲ್ಲೂ ಕಳ್ಳರ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಈಗಾಗಲೇ ನೂರಕ್ಕೂ ಹೆಚ್ಚು ಬಾಕ್ಸ್ ಟೊಮ್ಯಾಟೋವನ್ನು ಖದೀಮರು ಕಳುವು ಮಾಡಿದ್ದಾರೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬೈರೇಶ್​, ರಾತ್ರಿಯಿಡಿ ಹೊಲದಲ್ಲಿ ಕಾವಲು ಹಾಕಿ ಬೆಳೆ ಕಾಪಾಡಿಳ್ಳುತ್ತಿದ್ದಾರೆ.

ಬೈರೇಶ್​ ಕುಟುಂಬ ಖುಷ್​: ಮಳೆ ಕೊರತೆ, ರೋಗ ಬಾದೆ ಹಾಗೂ ಕಳ್ಳರ ಕಾಟ ನಡುವೆಯೂ ಬೈರೇಶ್​ ಟೊಮ್ಯಾಟೋ ಬೆಳೆದು ಭರ್ಜರಿ ಆದಾಯ ಗಳಿಸಿದ್ದಾರೆ. ಉಡುಪಿ, ಮಂಗಳೂರಿನಿಂದ ಬಂದು ಬಸ್ತಿಯಲ್ಲಿರುವ ಬೈರೇಶ್ ಹೊಲದಲ್ಲಿ ವರ್ತಕರು ಟೊಮ್ಯಾಟೋ ಖರೀದಿ ಮಾಡುತ್ತಿದ್ದಾರೆ. ಹೆಚ್ಚಿನ ಆದಾಯದಿಂದ ಬೈರೇಶ್​ ಕುಟುಂಬವೂ ಕೂಡ ತುಂಬಾ ಖುಷಿಯಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ