NEWSನಮ್ಮಜಿಲ್ಲೆನಮ್ಮರಾಜ್ಯ

ವಿಧಾನಸಭೆ ಕಲಾಪ: ಪ್ರಶ್ನೋತ್ತರ ವೇಳೆ ರಸ್ತೆ ಹಂಪ್‌ಗಳ ಬ್ರೇಕ್‌ಸೌಂಡ್‌: ಶಾಸಕ ರಮೇಶ್ ಕುಮಾರ್ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಹಂಪ್‌ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಸದನದಲ್ಲಿ ನಡೆದ ಪ್ರಶ್ನೋತ್ತರದ ವೇಳೆ ಮಾತನಾಡಿದ ಅವರು, ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರಸ್ತೆಡುಬ್ಬ ಹಾಕಿದ್ದಾರೆ. ಇದಕ್ಕೆಲ್ಲ ಯಾರು ಹೊಣೆ ಎಂದು ರಮೇಶ್ ಕುಮಾರ್ ಪ್ರಶ್ನಿಸಿದರು.

ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ ಇರಲಿ. ಆದರೆ ಮುಖ್ಯ ರಸ್ತೆಯಲ್ಲಿ ಸ್ಪೀಡ್ ಹಂಪ್‌ಗಳನ್ನು ಹಾಕುತ್ತಾರೆ. ಅಂಥ ಬೇಜವಾಬ್ದಾರಿ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಬೇಕು ಎಂದು ರಮೇಶ್ ಕುಮಾರ್ ಪ್ರಶ್ನೆ ಎತ್ತಿದರು. ಇನ್ನು ಈ ವೇಳೆ ರಮೇಶ್ ಕುಮಾರ್ ಪ್ರಶ್ನೆಗೆ ಸ್ಪೀಕರ್ ಪ್ರತಿಕ್ರಿಯೆ ನೀಡಿದರು.

ಎಲ್ಲ ಕಡೆ ಸಮಸ್ಯೆ ಇದೆ, ನಾನು ಕೂಡ ಹಂಪ್ ಸಮಸ್ಯೆ ಬಗ್ಗೆ ಕೆಲವು ಅಧಿಕಾರಿಗಳನ್ನು ಕೇಳಿದೆ. ಹಳ್ಳಿ ಜನ, ಶಾಸಕರು ಒತ್ತಾಯ ಮಾಡಿದ್ದಕ್ಕೆ ಹಾಕಿದ್ದೇವೆ ಅಂತಾ ಹೇಳಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರೆಂದು ಸಭಾಧ್ಯಕ್ಷ ಕಾಗೇರಿ ಉತ್ತರಿಸಿದರು.

ಬಳಿಕ ಮತ್ತೆ ಪ್ರಶ್ನೆ ಮಾಡಿದ ಶಾಸಕ ರಮೇಶ್ ಕುಮಾರ್ ಯಾರೋ ಹೇಳಿದ ಮಾತು ಅಧಿಕಾರಿಗಳು ಏಕೆ ಕೇಳಬೇಕು? ನಾನು ನಾಲ್ಕು ಜನರ ತಲೆ ತೆಗೆಯಿರಿ ಅಂತೇನೆ ಕೇಳ್ತಾರಾ ಎಂದು ಅಧಿಕಾರಿಗಳ ಮೇಲೆ ರಮೇಶ್ ಕುಮಾರ್ ಗರಂ ಆಗಿದ್ದಾರೆ.

ಇದಕ್ಕೆ ಬರೀ ಉತ್ತರ‌ಕೊಟ್ಟರೇ ಹೇಗೆ? ಸಂಜೆಯೊಳಗೆ ಅಧಿಕಾರಿಗಳನ್ನು ಸ್ಪಸ್ಪೆಂಡ್ ಮಾಡಿ, ಎಲ್ಲ ಹಂಪ್‌ಗಳು ಸೈಡ್‌ಗೆ ಹೋಗ್ತವೆ, ಏನು ಉತ್ತರ ಕೊಡುತ್ತಾರೆ ಅಧಿಕಾರಿಗಳು? ಅಧಿಕಾರಿಗಳ ಕಣ್ಣಿಗೆ ನಾವೇನು ಬಪೂನ್‌ಗಳ ತರಾ ಕಾಣ್ತೀವಾ?ಯಾರೋ ನಾಲ್ಕೈದು ಜನ ರೌಡಿಗಳು ಬಟನ್ ಬಿಚ್ಕೊಂಡು ಬರ್ತಾರೆ, ಅವರ ಮಾತು ಕೇಳುತ್ತಾರೆ ಎಂದು ಗರಂ ಆದರು.

ಇನ್ನು ಲೋಕೋಪಯೋಗಿ ಸಚಿವ ಸಿಸಿ ಪಾಟಿಲ್‌ ಅವರು ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳ ಸಹಕಾರದಿಂದ ಎಲ್ಲವನ್ನು ಸರಿಪಡಿಸುತ್ತೇವೆ ಎಂದು ಉತ್ತರಕೊಟ್ಟರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು