NEWSನಮ್ಮರಾಜ್ಯ

ವರ್ಗಾವಣೆ ವಿಚಾರ: ಸಾರಿಗೆ ಅಧಿಕಾರಿಗಳಿಗೆ ಒಂದು ನ್ಯಾಯ ನೌಕರರಿಗೊಂದು ನ್ಯಾಯ: ವಕೀಲ ಶಿವರಾಜು ಕಿಡಿ

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಾಲ್ಕೂ ನಿಗಮಗಳಲ್ಲಿ ಈಗಾಗಲೇ ಕಳೆದ ಏಪ್ರಿಲ್‌ನಲ್ಲಿ ವರ್ಗಾವಣೆಗೊಂಡಿರುವ ನೌಕರರನ್ನು ನೀವು ವರ್ಗಾವಣೆಯಾಗಿರುವ ಸ್ಥಳದಲ್ಲೇ ಹೋಗಿ ಕರ್ತವ್ಯ ಮಾಡಬೇಕು ಎಂದು ನಿಗಮದ ಮುಖ್ಯಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಆದರೆ ಇತ್ತೀಚೆಗೆ ವರ್ಗಾವಣೆ ಮಾಡಿರುವ ವಿವಿಧ ಘಟಕಗಳ ವ್ಯವಸ್ಥಾಪಕರು ಮತ್ತು ಅಧಿಕಾರಿಗಳಲ್ಲಿ ಕೆಲವರಿಗೆ ಮೂಲ ಘಟಕದಲ್ಲೇ ಮುಂದುವರಿಯಲು ತಿಂಗಳ ಬಳಿಕ ಅದೇಶ ಹೊರಡಿಸಿದ್ದಾರೆ ಇದು ಯಾವ ನ್ಯಾಯ ಎಂದು ಸುಪ್ರೀಂಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಕೇಳಿದ್ದಾರೆ.

ಇನ್ನು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮತ್ತೆ ಮೂಲ ಘಟಕದಲ್ಲೇ ಮುಂದುವರಿಯುವಂತೆ ಆದೇಶ ಮಾಡಿದ್ದೀರಲ್ಲ ಅದೇ ರೀತಿ ನೌಕರರ ವರ್ಗಾವಣೆಯನ್ನು ರದ್ದು ಮಾಡಿ ಅವರಿಗೂ ಅಧಿಕಾರಿಗಳಿಗೆ ನೀಡಿದಂತ ಆದೇಶವನ್ನು ನೀಡಬೇಕು. ಇಲ್ಲ ಈ ಎಲ್ಲದ ವಿರುದ್ಧ ಮುಂದಿನ ದಿನಗಳಲ್ಲಿ ಹೈ ಕೋರ್ಟ್‌ನಲ್ಲೇ ನೀವು  ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮೂರು ದಿನಗಳವರೆಗೂ ಕಾದು ನೋಡಲಾಗುವುದು. ನೌಕರರನ್ನು ಮತ್ತೆ ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡದಿದ್ದರೆ ಈ ಸಂಬಂಧ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು  ತಿಳಿಸಿದ್ದಾರೆ.

ಇನ್ನು ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸು ಅಳವಡಿಸುವ ಸಂಬಂಧ ನಾಲ್ಕೂ ಸಾರಿಗೆ ನಿಗಮಗಳ ವ್ಯವಸ್ಥಾಪಕರ ಜತೆಗೆ ಸಭೆ ಕರೆದಿರುವುದು ಸ್ವಾಗತಾರ್ಹ. ಅದರ ಜತೆಗೆ ನಿಗಮಗಳಲ್ಲಿ ಮುಷ್ಕರ ವೇಳೆ ವಜಾ, ವರ್ಗಾವಣೆ ಮತ್ತು ಅಮಾನತು ಗೊಂಡಿರುವ ನೌಕರರ ಬಗ್ಗೆಯೂ ಸರ್ಕಾರ ಗಮನಹರಿಸಿ ಶೀಘ್ರದಲ್ಲೇ ಅವರನ್ನು ಕರ್ತವ್ಯಕ್ಕೆ ಮರಳುವಂತಹ ಕ್ರಮ ತೆಗೆದುಕೊಳ್ಳಬೇಕು ಎಂದು  ಒತ್ತಾಯಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಮಾಡಿದ ವೇಳೆ ಅಮಾಯಕ ನೌಕರರ ವಿರುದ್ಧ ಶಿಸ್ತುಪಾಲನೆ ಹೆಸರಿನಲ್ಲಿ ಕ್ರಮ ತೆಗೆದುಕೊಂಡು ಅವರ ಜೀವನವನ್ನು ನರಕವಾಗಿಸಿರುವುದು ಸರಿಯಲ್ಲ.

ಹೀಗಾಗಿ ಸರ್ಕಾರ ಅತೀ ಶೀಘ್ರದಲ್ಲೇ ದೂರದೂರುಗಳಿಗೆ ವರ್ಗಾವಣೆ ಮಾಡಿರುವ ನೌಕರರನ್ನು ಮತ್ತು ವಜಾ ಮಾಡಿರುವ ನೌಕರರಿಗೆ ಕಾನೂನಾತ್ಮಕವಾದ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.

ಇನ್ನು ಇಂದು ಮಧ್ಯಾಹ್ನ 3.30ಕ್ಕೆ 6ನೇ ವೇತನ ಆಯೋಗದ ಶಿಫಾರಸು ಅಳವಡಿಸುವ ಸಂಬಂಧ ನಡೆಯುವ ಸಭೆಯಲ್ಲಿ ಸರ್ಕಾರದ ಇಲಾಖೆಯ ಮುಖ್ಯ, ಅಧೀನ ಕಾರ್ಯದರ್ಶಿಗಳು ಮತ್ತು ನಿಗಮಗಳ ಎಂಡಿಗಳ ಹೊರತು ಬೇರೆ ಯಾರು ಪಾಲ್ಗೊಳ್ಳಲು ಸಾಧ್ಯವಿಲ್ಲ.

ಹೀಗಾಗಿ ಅಲ್ಲಿ ಏನು ಚರ್ಚೆಯಾಯಿತು ಎಂಬುವುದು ಬಹಿರಂಗವಾಗುವುದಿಲ್ಲ. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಗೌಪ್ಯವಾಗಿರುತ್ತವೆ. ಅದು ಸರ್ಕಾರದ ಮಟ್ಟದಲ್ಲಿ ನಡೆಯುವ ಸಭೆಯಾಗಿರುವುದರಿಂದ ಆ ಗೌಪ್ಯತೆ ಕಾಪಾಡಿಕೊಂಡು ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಆ ವಿಚಾರ ಈಗ ಅಪ್ರಸ್ತುತ ಎಂದು ತಿಳಿಸಿದ್ದಾರೆ.

ಆದರೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುವವರೆಗೂ ವಜಾ, ವರ್ಗಾವಣೆ ಮತ್ತು ಅಮಾನತು ಶಿಕ್ಷೆಗೊಳಗಾಗಿರುವ ನೌಕರರ ಪಾಡೇನು ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಂಡು ಅವರಿಗೆ ಮಾನವೀಯತೆ ನೆಲೆಗಟ್ಟಿನ ಮೇಲೆ ಈ ಹಿಂದೆ (ಏ.6ರ) ಇದ್ದಂತಹ ಸ್ಥಿತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು 6ನೇ ವೇತನ ಆಯೋಗದ ಶಿಫಾರಸು ಅಳವಡಿಸುವ ಸಂಬಂಧ ಇಂದು ನಡೆಯುವ ಸಭೆಯಲ್ಲೇ ಅಂತಿಮ ತೀರ್ಮಾನವಾಗುವುದಿಲ್ಲ. ಅದು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಬೇಕು. ಇಲ್ಲ ಅಧಿವೇಶನಲ್ಲಿ ಅಂಗಿಕರಿಸಬೇಕು. ಅಲ್ಲಿಯವರೆಗೂ ನೌಕರರು ಕಾಯಲೇ ಬೇಕಿದೆ.

ಹೀಗಾಗಿ ಪ್ರಸ್ತುತ ನೌಕರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕಿದೆ ಎಂದು ವಕೀಲ ಶಿವರಾಜು ಒತ್ತಾಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು