NEWSನಮ್ಮರಾಜ್ಯಸಿನಿಪಥ

ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಇಂದಿಗೆ (ಅ.29) 3 ವರ್ಷ ಕಳೆದಿದೆ. ಈ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ ನೆರವೇರಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಘವೇಂದ್ರ ರಾಜ್‌ಕುಮಾರ್‌ (ರಾಘಣ್ಣ), ವರ್ಷ ಮೂರು ಮರೆಯದ ನೆನಪು ನೂರಾರು ಎಂದು ಸಹೋದರ ಪುನೀತ್‌ರನ್ನು ಸ್ಮರಿಸಿದ್ದಾರೆ. ಅಲ್ಲದೆ ಅಪ್ಪ ಮಾಡಿರುವ ಪುಣ್ಯಕೆಲಸವನ್ನು ಅಭಿಮಾನಿಗಳು ಒಬ್ಬರಿಗಾದರೂ ಮಾಡಿ ನೆರವಾಗಿ ಎಂದು ಕರೆ ನೀಡಿದರು.

ಇನ್ನು ನಾವು ಪುನೀತ್ ದಿನ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಹೇಗೆ ದಿನಗಳು ಉರುಳುತ್ತಿವೆ. ಆದರೂ ಜನಗಳಿಗೆ ಅಪ್ಪು ಮೇಲಿನ ಪ್ರೀತಿ ಕಮ್ಮಿಯಾಗುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಅಪ್ಪು ಮೇಲಿನ ಪ್ರೀತಿ ಹೆಚ್ಚಾಗುತ್ತಲೇ ಇದೆ. ವರ್ಷ ಮೂರು ಮರೆಯದ ನೆನಪು ನೂರಾರು ಎಂದು ಅಪ್ಪು ಅವರ ನನೆದರು ರಾಘಣ್ಣ.

ಪ್ರತಿದಿನ ಆತ ಶಾರೀರಿಕವಾಗಿ ಇಲ್ಲವಲ್ಲವೆಂಬ ನೋವಿನಲ್ಲೇ ನಾವು ಕಾಲ ಕಳೆಯುತ್ತಿದ್ದೇವೆ. ಪುನೀತ್ ಕೊಟ್ಟ ಸ್ಫೂರ್ತಿ ಹಿನ್ನೆಲೆಯಲ್ಲಿ ಅಪ್ಪು ಹುಟ್ಟುಹಬ್ಬವನನ್ನು ಸ್ಫೂರ್ತಿ ದಿನವಾಗಿ ಆಚರಿಸುತ್ತೇವೆ. ನಿಮ್ಮ ಪ್ರೀತಿಗೆ ಬೆಲೆ ಕಟ್ಟೋಕೆ ಆಗೋಲ್ಲ. ಅಪ್ಪು ನಮ್ಮ ಮನೆಗೆ ಮಾತ್ರ ಅಲ್ಲ, ಎಲ್ಲರಿಗೂ ಬೇಕು ಎಂದು ಸ್ಮರಿಸಿದರು.

ಅಂದಹಾಗೆ, 2021ರ ಅ.29ರಂದು ಪುನೀತ್ ರಾಜ್‌ಕುಮಾರ್ ಅವರು ನಿಧನರಾದರು. ಕರುನಾಡ ಕಿರುನಗೆ ಕಣ್ಮರೆಯಾದ ದಿನವದು. ನಗುವಿನ ಅರಸನ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.

ನಗುಮೊಗದ ಒಡೆಯ ಪುನೀತ್‌ ಸ್ಟಾರ್ ಬ್ಯಾಕ್‌ಗ್ರೌಂಡ್‌ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಮೂರು ವರ್ಷಗಳು. ಆದರೂ ಕೂಡಾ ಅವರನ್ನು ಕಳೆದುಕೊಂಡ ದುಃಖ ಮಾತ್ರ ಅವರ ಭಕ್ತಗಣದ ಎದೆಯಿಂದ ಜಾರುತ್ತಿಲ್ಲ.

ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ವಿನಯ್ ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದೆ.

ಅಪ್ಪು ಇಲ್ಲ ಎಂದು ಅವರ ಅಭಿಮಾನಿಗಳು ಸುಮ್ಮನೆ ಕುಳಿತಿಲ್ಲ. ಅವರ ಹೆಸರಿನಲ್ಲಿ ಸಾಕಷ್ಟು ಪುಣ್ಯದ ಕೆಲಸಗಳನ್ನು ವರ್ಷಪೂರ್ತಿ ಮಾಡುತ್ತಿದ್ದಾರೆ. ಇಂದು ಪುಣ್ಯ ಸ್ಮರಣೆ ವಿಶೇಷವಾಗಿ ಕಂಠೀರವ ಸ್ಟುಡಿಯೋದಲ್ಲಿ ಹಾಗೂ ರಾಜ್ಯದ ಮೂಲೆ ಮೂಲೆಗಳಲ್ಲೂ ಅನ್ನದಾನ, ರಕ್ತದಾನ ಶಿಬಿರಗಳು ನಡೆಯುತ್ತಿವೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಅಪ್ಪು ಅಭಿಮಾನಿ ಯಲಗಚ್ಚಿನಲ್ಲಿ ಗುಡಿಯೊಂದನ್ನು ಕಟ್ಟಿ ಅಭಿಮಾನ ಮೆರೆದಿದ್ದಾನೆ. ಅಲ್ಲೂ ಕೂಡಾ ಇಂದು ವಿಶೇಷ ಪೂಜೆ ನಡೆಯುತ್ತಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ