NEWSನಮ್ಮಜಿಲ್ಲೆಬೆಂಗಳೂರು

ವೆಲ್ಲಾರ ಜಂಕ್ಷನ್ ಕಾಮಗಾರಿ ಶೀಘ್ರ ಆರಂಭಿಸಲು ಆಗ್ರಹಿಸಿ ಎಎಪಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ವೆಲ್ಲಾರ ಜಂಕ್ಷನ್ ಹಾಗೂ ವೈಟ್ ಫೀಲ್ಡ್ ವರೆಗಿನ ಸಿಗ್ನಲ್ ಫ್ರೀ ಕಾರಿಡಾರ್ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಇಂದು ಸ್ಥಳದಲ್ಲಿ ಪ್ರತಿಭಟನೆ ಮಾಡಿದರು.

ನಗರದ ಹಳೆ ಏರ್ ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯ ಜಂಕ್ಷನ್ ಬಳಿ ಜಮಾವಣೆಗೊಂಡ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಜಗದೀಶ್ ಬಾಬು ನೇತೃತವದಲ್ಲಿ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಬಾಬು, 15 ವರ್ಷಗಳ ಹಿಂದೆಯೇ ಈ ಕಾಮಗಾರಿಗೆ ಚಾಲನೆ ಸಿಕ್ಕಿತ್ತು. ಆದರೆ ಸರ್ಕಾರವು ಈ ರಸ್ತೆಯಲ್ಲಿ ದೇಶದ ಪ್ರಧಾನ ಮಂತ್ರಿಗಳು, ಪ್ರಮುಖ ಮಂತ್ರಿಗಳು ಸೇರಿದಂತೆ ಅನೇಕ ಪ್ರತಿಷ್ಠಿತ ರಾಜಕಾರಣಿಗಳು ಓಡಾಡುತ್ತಾರೆ ಎಂಬ ಕಾರಣ ನೀಡಿ ಈ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಸರ್ಕಾರಕ್ಕೆ ಪ್ರಭಾವಿ ರಾಜಕಾರಣಿಗಳ ಹಿತಾಸಕ್ತಿಯೇ ಮುಖ್ಯವಾಗಿದೆಯೇ ಹೊರತು, ಪ್ರತಿನಿತ್ಯ ಸಂಚಾರ ಸಮಸ್ಯೆಯಿಂದ ಯಾತನೆ ಅನುಭವಿಸುತ್ತಿರುವ ಲಕ್ಷಾಂತರ ಪ್ರಯಾಣಿಕರ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯೇ ಇಲ್ಲದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರು.

ಈ ಭಾಗದಲ್ಲಿ ಎಚ್ಎಎಲ್, ಎನ್ಎಎಲ್ ಹಾಗೂ ಡಿಆರ್‌ಡಿಒ ದಂತಹ ರಕ್ಷಣಾ ಸಂಸ್ಥೆಗಳ ಸ್ಥಾಪನೆಯಿಂದ ಬೆಂಗಳೂರಿಗೆ ಬ್ರಾಂಡ್ ತಂದಿರುವ ಹಿರಿಮೆ ಈ ರಸ್ತೆಗೆ ಇದೆ. ಸದಾ ಬ್ರಾಂಡ್ ಬೆಂಗಳೂರೆಂದು ಮಾತನಾಡುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಕಡೆ ಗಮನಹರಿಸಿ ಕೂಡಲೇ ಈ ಭಾಗದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಪಕ್ಷದ ಮುಖಂಡರಾದ ಅನಿಲ್ ನಾಚಪ್ಪ, ಲೋಕೇಶ್ ಕುಮಾರ್, ಭಾನುಪ್ರಿಯ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ