NEWSನಮ್ಮರಾಜ್ಯ

ವಲಸೆ ಕಾರ್ಮಿಕರ ಅಹವಾಲು ಆಲಿಸಿದ ಕೊರೊನಾ ಸೈನಿಕರು

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಜಿಲ್ಲೆಯ ಘೊಂಡಪಳ್ಳಿ ಮತ್ತು ಕಪಲಾಪೂರನಲ್ಲಿ 72ಕ್ಕೂ ಹೆಚ್ಚು ಅಂತಾರಾಜ್ಯ ವಲಸೆ ಕಾರ್ಮಿಕರನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬದ ಮತ್ತು ಕೊರೊನಾ ಸೈನಿಕರು ಭೇಟಿ ಮಾಡಿ ಅಹವಾಲು ಆಲಿಸಿದರು.

ಅಂತಾರಾಜ್ಯ ವಲಸೆ ಕಾರ್ಮಿಕರಿಗೆ ಇರುವ ಸರಕಾರದ ಯೋಜನೆಗಳ ಬಗ್ಗೆ ಇದೆ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಕೊರೊನಾ ಬಂದಿರುವ ಈ ಸಂದರ್ಭದಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡುವಂತೆ, ಕಾರ್ಮಿಕ ಗರ್ಭಿಣಿಯರು ಕಾಲಕಾಲಕ್ಕೆ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದರು.

ಯಾರೇ ಮಧ್ಯವರ್ತಿಗಳು ಕಾರ್ಮಿಕರಿಗೆ ವಂಚನೆ ಮಾಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು. ಅಂತಹ ಯಾವುದೇ ಕಿರುಕುಳ ಎದುರಾದರೆ ತಮ್ಮ ಗಮನಕ್ಕೆ ತರಬೇಕು ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದರು.

ಕೊರೊನಾ ಸೈನಿಕರಾದ ಲಕ್ಷ್ಮಿ ಬಾವಗೆ, ಗೀತಾ ಮಾಹಾಲಿಂಗಪುರ ಹಾಗೂ ಸಮಾಜ ಸೇವಕ ಪ್ರದೀಪ್ ಕುಂಚೆ ಹಾಗೂ ಇತರರು, ಕರೋನಾ ಬಾರದಂತೆ ವಹಿಸಬೇಕಾದ ಮುಂಜಾಗ್ರತೆಗಳ ಬಗ್ಗೆ ತಿಳಿಸಿದರು. ಮಾಸ್ಕ್‌, ಸ್ಯಾನಿಟೈಜರ್ ಬಳಸುವಂತೆ ಕಾರ್ಮಿಕರಿಗೆ ತಿಳಿಸಿದರು. ಆರೋಗ್ಯ ಅಧಿಕಾರಿಗಳಾದ  ಅಸಲಾಂ ಹಾಗೂ ಇತರರು ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ