NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ- ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಪ್ರವಾಸಿಗರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.

750 ಕೆ.ಜಿ.ಯ ಅಂಬಾರಿಯಲ್ಲಿ ಚಾಮುಂಡಿದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಅಭಿಮನ್ಯು ಬನ್ನಿ ಮಂಟಪದತ್ತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆದ ನಾಡಹಬ್ಬಕ್ಕೆ ತೆರೆ ಬೀದಿದೆ. ಈ ವೇಳೆ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ  ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸಿದ್ದರು.

ಈ ಮೂಲಕ ಸಾಂಸ್ಕೃತಿಕ ರಾಜಧಾನಿ ಮೈಸೂರು ಮತ್ತೊಮ್ಮೆ ರಾಜ ವೈಭೋಗಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಈ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ನಂತರ, ಅಭಿಮನ್ಯು ಮೇಲೆ ಅಂಬಾರಿಯನ್ನು ಕೂರಿಸಲಾಯಿತು. ಸಂಜೆ 4.40 ರಿಂದ 5 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಗಜರಾಜ ಅಭಿಮನ್ಯು ಹೊತ್ತುಬಂದ 750 ಕೆಜಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಸುಮಾರು 5.10ಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮೈಸೂರು ಮೇಯರ್‌, ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್‌ ಕೂಡ ಉಪಸ್ಥಿತರಿದ್ದರು.

4 ದಶಕಗಳ ಭವ್ಯ ಇತಿಹಾಸ: 1610ರಲ್ಲಿ ಆರಂಭಗೊಂಡ ದಸರಾ ಮಹೋತ್ಸವಕ್ಕೆ 4 ದಶಕಗಳ ಭವ್ಯ ಇತಿಹಾಸವಿದೆ. ಮೈಸೂರು ದಸರಾ ದೇಶದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಲ್ಲೇ ಚಿರಪರಿಚಿತ ಹಾಗೂ ಪ್ರಖ್ಯಾತಿ ಪಡೆದಿದೆ.

ಆದರೆ ಈ ಬಾರಿ ಮಳೆ ಬಾರದ ಕಾರಣಕ್ಕೆ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯದೆ ಸೊರಗಿ ಹೋಗುತ್ತಿದೆ ಎಂದೇ ಭಾವಿಸಲಾಗಿತ್ತು. ಈ ನಡುವೆ ಅದಕ್ಕೆ ಅವಕಾಶವಿಲ್ಲ ಎಂಬಂತೆ ಈ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ದಸರಾ ದಿಬ್ಬಣ ನೆರವೇರಿತು. ಸಾಲಂಕೃತ ಗಜಪಡೆಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕಿದನು.

ಬೆಳಗ್ಗೆಯಿಂದಲೂ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಪ್ರದಾಯ ಬದ್ಧ ಕಾರ್ಯಕ್ರಮಗಳು ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳ ಜತೆಗೆ ಆಗಮಿಸಿ ಮಧ್ಯಾಹ್ನ ನಂದಿ ಧ್ವಜಕ್ಕೆ ಪೂಜೆ ಮಾಡುವ ಮೂಲಕ ದಸರಾ ದಿಬ್ಬಣಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಿದ್ದಂತೆ ಕಲಾ ತಂಡಗಳ ಹಾಗೂ ಟ್ಯಾಬ್ಲೋಗಳ ಮೆರವಣಿಗೆ ಆರಂಭವಾಯಿತು. ಕೀಲುಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಹೀಗೆ ಹತ್ತು ಹಲವು ಬಗೆಯ ಕಲಾ ಪಾಂಡಿತ್ಯ ಪ್ರದರ್ಶನಗೊಂಡಿತು. ಸ್ತಬ್ಧ ಚಿತ್ರಗಳ ಯಾತ್ರೆಯಲ್ಲಂತೂ ಈ ಬಾರಿ ಸರ್ಕಾರದ ಐದು ಗ್ಯಾರಂಟಿಗಳ ಟ್ಯಾಬ್ಲೋ ವಿಶೇಷ ಸ್ಥಾನ ಪಡೆದವು. ಪೊಲೀಸ್ ಬ್ಯಾಂಡ್ ಸಹ ವೀಕ್ಷಕರಿಗೆ ಮುದ ನೀಡಿತು.

4ನೇ ಬಾರಿಗೆ ಅಂಬಾರಿ ಹೊತ್ತ ಅಭಿಮನ್ಯುಗೆ ನಿಶಾನೆ ಆನೆಯಾಗಿ ಅರ್ಜುನ, ನೌಫತ್ ಮತ್ತು ಸಾಲಾನೆಯಾಗಿ ಗೋಪಿ, ಧನಂಜಯ, ಮಹೇಂದ್ರ, ಭೀಮ,  ಪ್ರಶಾಂತ್‌ ಸಾಥ್ ನೀಡಿದರೆ, ವರಲಕ್ಷ್ಮೀ ಮತ್ತು  ವಿಜಯಾ ಎಂಬ ಹೆಣ್ಣಾನೆಗಳು ಕುಮ್ಕಿ ಆನೆಗಳ ಪಾತ್ರವಹಿಸಿದವು.

ಬರದ ನಡುವೆಯೂ ಈ ಬಾರಿ ಅರಮನೆ ಆವರಣ ದಾಟಿದ ಜಂಬೂ ಸವಾರಿ ರಾಜಪಥದಲ್ಲಿ ಸಾಗಿ ದಸರಾ ಮೆರಗು ಹೆಚ್ಚಿಸಿತು. ಲಕ್ಷಾಂತರ ಮಂದಿ ಕಣ್ತುಂಬಿಕೊಂಡು ಸಂತಸ ವ್ಯಕ್ತಪಡಿಸಿದರು. ಸುಮಾರು 25 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಬಾರಿ ನೀರಿಕ್ಷೆಗೂ ಮೀರಿ ಜನ ಸೇರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ