NEWSನಮ್ಮರಾಜ್ಯರಾಜಕೀಯ

ವೆಸ್ಟೆಂಡ್ ಹೋಟೆಲ್‌ನಲ್ಲಿ ಕಾಲ ಕಳೆದಿದ್ದು ಏಕೆ – ಸರ್ಕಾರಿ ಮನೆ ನೀವು ಕಿತ್ತುಕೊಂಡಿದ್ದಕ್ಕೆ: ಸಿದ್ದು ವಿರುದ್ಧ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ವೆಸ್ಟೆಂಡ್ ಹೋಟೆಲ್‌ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖಾರವಾಗಿಯೇ ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ನಗರದಲ್ಲಿ ಮಾತನಾಡಿದ ಎಚ್‌ಡಿಕೆ, ಈ ಬಗ್ಗೆ ಸಾವಿರಾರು ಬಾರಿ ಹೇಳಿದ್ದೇನೆ, ಮೊದಲನೇ ಅಪರಾಧ (ಸಿದ್ದರಾಮಯ್ಯ) ಅವರದ್ದೇ ಆಗಿದೆ. ಜಾರ್ಜ್ ಹೆಸರಲ್ಲಿ ಮನೆ ತಗೊಂಡು ಅದರಲ್ಲಿ ಮುಂದುವರಿದರು. ನನಗೆ ಸರ್ಕಾರಿ ಕ್ವಾಟರ್ಸ್ ಮನೆ ಬಿಟ್ಟುಕೊಡಲಿಲ್ಲ. ಈಗ ಕೇಂದ್ರ ನಾಯಕರೆಲ್ಲ ಬರ್ತಿದ್ದಾರಲ್ಲ, ಅವರು ಎಲ್ಲಿ ವಾಸ್ತವ್ಯ ಮಾಡ್ತಾರೆ ? ವೆಸ್ಟೆಂಡ್ ಹೋಟೆಲ್​​​ನಲ್ಲಿ ನಾನು ಪರ್ಮನೆಂಟ್ ಆಗಿ ಇದ್ದವ್ನಾ ಕೇಳಿ ಎಂದು ಪ್ರಶ್ನಿಸಿದರು.

ನಾನು ಹೋಟೆಲ್​​ನಲ್ಲಿ ಇದ್ಕೊಂಡು ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡ್ತಿದ್ದೆ. ಸಿದ್ದರಾಮಯ್ಯ ಯಾವ ರೀತಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲಿರಿಗೂ ಗೊತ್ತಿರುವ ವಿಚಾರ. ಮಧ್ಯಾಹ್ನ 1ಗಂಟೆಗೆ ವಿಧಾನಸೌಧ ಖಾಲಿ ಮಾಡಿಕೊಂಡು ಹೋದ್ರೆ…ಎಲ್ಲಿಗೆ ಹೋಗ್ತಿದ್ರು, ಆರು ಗಂಟೆ ಮೇಲೆ ಯಾರಿಗೆ ಸಿಗುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಇನ್ನು ನಾನು ರಾತ್ರಿ 12 ಗಂಟೆವರೆಗೆ ಕೆಲಸ ಮಾಡುತ್ತಿದ್ದೆ. ಕಾಂಗ್ರೆಸ್​​ನ 78 ಶಾಸಕರಿಗೆ ನನ್ನ 14 ತಿಂಗಳ ಆಡಳಿತ ಅವಧಿಯಲ್ಲಿ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೀನಿ. ಇವತ್ತು ಬಿಜೆಪಿ ಸರ್ಕಾರದಲ್ಲಿ ಕೆಲಸ ನಡೆದಿರೋದು, ನಾನು ಸಿಎಂ ಆಗಿದ್ದಾಗ ಕೊಟ್ಟ ದುಡ್ಡಿನಿಂದ ಆಗಿದೆ. ಬಾದಾಮಿಗೆ ಅಭಿವೃದ್ದಿ ಕೆಲಸ ಆಗಿದ್ದು, ನಾನು ಕೊಟ್ಟ ದುಡ್ಡಿನಲ್ಲಿ‌ಯೇ ಎಂದು ತಮ್ಮ ಆಡಳಿತಧಿಯಲ್ಲಿ ನಡೆದ ಅಭಿವೃದ್ಧಿಯ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟರು.

ಸಿದ್ದರಾಮಯ್ಯಗೆ ಬಿಜೆಪಿಯವರಿಂದ ದುಡ್ಡು ತೊಗೊಳ್ಳಾಕೆ ಆಯ್ತಾ ಎಂದು ಪ್ರಶ್ನಿಸಿದ ಅವರು, ಜನರ ಬಳಿಗೆ ಹೋಗಿ ಕೆಲಸ ಹೆಂಗೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯ ಅವರಿಂದ ಕಲಿಯಬೇಕಿಲ್ಲ. ಬಾದಾಮಿಗೆ ತಂದಿದ್ದು ನಾಲ್ಕು ಸಾವಿರ ಕೋಟಿ ಎಲ್ಲಿದೆ ದುಡ್ಡು ಎಂದು ಮರು ಪ್ರಶ್ನೆ ಹಾಕಿದರು.

ಇನ್ನು ಮಳೆಗಾಲದಲ್ಲಿ ಜಲಾವೃತವಾಗುವ ಯಾವುದಾದರೂ ಒಂದು ಹಳ್ಳಿಗೆ ಪುನರ್ ವಸತಿ ಕಲ್ಪಿಸಿದ್ದಾರಾ. 5 ವರ್ಷದಲ್ಲಿ ಬಾದಾಮಿಗೆ ಮೂಲಭೂತ ಸೌಲಭ್ಯವನ್ನಾದ್ರೂ ಕಲ್ಪಿಸಿದ್ದಾರಾ? ಬರಿ ಬೇರೆಯವರ ಬಗ್ಗೆ ಕಾಲೆಳೆದುಕೊಂಡು ಜನಗಳನ್ನು ನಂಬಿಸುವ ಕೆಲಸ ಮಾಡುವ ಬದಲಿಗೆ ತಮ್ಮನ್ನು ಗೆಲ್ಲಿಸಿದ ಕ್ಷೇತ್ರದ ಜನರ ಸೇವೆ ಮಾಡಿದ್ದರೆ ಇವರಿಗೆ ಮತ್ತೊಂದು ಕ್ಷೇತ್ರ ನೋಡಿಕೊಳ್ಳುವ ಗತಿ ಬರುತ್ತಿಲ್ಲ ಎಂದು ಕಿಡಿಕಾರಿದರು.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!