CrimeNEWS

ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರ ಅಟ್ಟಾಡಿಸಿ ಹೊಡೆದ ಪಬ್ಲಿಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರನ್ನು ಸಾರ್ವಜನಿಕರು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

ಇದು ನಗರದಲ್ಲಿ ನಡೆದಿರುವ ಎರಡನೇ ಘಟನೆಯಾಗಿದ್ದು, ಕಳೆದ ತಿಂಗಳು ಯಲಹಂಕದಲ್ಲಿ ಬೈಕ್ ಟೋಯಿಂಗ್ ಮಾಡೋ ವಿಚಾರವಾಗಿ ಇಬ್ಬರಿಗೆ ಹೆಲ್ಮೆಟ್‍ನಿಂದ ಹಿಗ್ಗಾಮುಗ್ಗ ಸಾರ್ವಜನಿಕರು ಥಳಿಸಿದ್ದರು. ಘಟನೆ ಸಂಬಂಧ ಹಲ್ಲೆಮಾಡಿದವರ ಮೇಲೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಇಬ್ಬರನ್ನು ಬಂಧಿಸಲಾಗಿತ್ತು.

ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ಹಲಸೂರು ಸಂಚಾರಿ ಪೊಲೀಸ್ ಠಾಣಾ ಟೋಯಿಂಗ್ ಹುಡುಗರ ಮೇಲೆ ಹಲ್ಲೆ ನಡೆದಿದೆ. ಇಂದಿರಾ ನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಬೈಕ್ ಟೋಯಿಂಗ್ ಮಾಡುವ ವಿಚಾರವಾಗಿ ಸಾರ್ವಜನಿಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸಾರ್ವಜನಿಕರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಘಟನೆ ಸಂಬಂಧ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣಾ ಎಸ್.ಐ ರಾಜೇಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು