NEWSಸಂಸ್ಕೃತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಎನ್. ಭೃಂಗೀಶ್ ನಿವೃತ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಎನ್. ಭೃಂಗೀಶ್ ಅವರು ಇಂದು ವಯೋ ನಿವೃತ್ತಿ ಹೊಂದಿದರು.

ಸರ್ಕಾರಿ ಸೇವೆಗಿಂತ ಮುಂಚಿತವಾಗಿ ದಿನಪತ್ರಿಕೆಯೊಂದರ ವರದಿಗಾರರಾಗಿದ್ದ ಅವರು 1990 ರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ತಮ್ಮ ಸರ್ಕಾರಿ ವೃತ್ತಿಯನ್ನು ತುಮಕೂರು ಜಿಲ್ಲೆಯ ಮಧುಗಿರಿ ಉಪ ವಿಭಾಗೀಯ ಕಚೇರಿಯಲ್ಲಿ ಆರಂಭಿಸಿದ್ದರು. ಪ್ರಸ್ತುತ ಅವರು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಿದ್ದಾರೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಮೇಲಿನ ಹಿಡಿತ ಅವರನ್ನು ಬಹುಬೇಗನೆ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಗೆ ತಂದು ಕೂಡಿಸಿತ್ತು. ತಮ್ಮ ಸುದೀರ್ಘ 30 ವರ್ಷಗಳ ಸೇವಾ ಅವಧಿಯಲ್ಲಿ 25ಕ್ಕೂ ಹೆಚ್ಚಿನ ವರ್ಷಗಳನ್ನು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮಾಧ್ಯಮ ಮುಖ್ಯಸ್ಥರಾಗಿ ಕರ್ನಾಟಕ ಕಂಡ 10 ಮುಖ್ಯಮಂತ್ರಿಗಳ ಜೊತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಬೀಳ್ಕೊಡೆಗೆಯ ಸರಳ ಕಾರ್ಯಕ್ರಮದಲ್ಲಿ ಅವರ ಪ್ರತಿಭೆಯನ್ನು ಹಿರಿ-ಕಿರಿಯ ಅಧಿಕಾರಿಗಳು ಕೊಂಡಾಡಿದರು. ಈ ಸಮಯದಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಿಬ್ಬಂದಿ  ಉಪಸ್ಥಿತರಿದ್ದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ