NEWSದೇಶ-ವಿದೇಶ

ವಿಶ್ವ ಆರೋಗ್ಯ ಸಂಸ್ಥೆಗೆ 30 ಮಿಲಿಯನ್‌ ಡಾಲರ್‌ ದೇಣಿಗೆ ನೀಡಲು ಮುಂದಾದ ಚೀನಾ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್:  ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡಬೇಕಾಗಿದ್ದ ಹಣಕಾಸು ನೆರವನ್ನು ತಡೆಹಿಡಿದಿದ್ದರಿಂದ ಚೀನಾ ಡಬ್ಲ್ಯುಎಚ್ ಒಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ದೇಣಿಗೆ ನೀಡುವುದಾಗಿ ಗುರುವಾರ ಘೋಷಿಸಿದೆ.

ವಿಶ್ವಮಾರಿ ಕೊರೊನಾ ಸೋಂಕು ವಿಚಾರದಲ್ಲಿ ವಿಶ್ವದ ಬಲಿಷ್ಠ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾ ನಡುವೆ ವಾಕ್ಸಮರ, ಜಟಾಪಟಿ ಮುಂದುವರಿದಿರುವುದು ಹಳೇ ವಿಷಯವಾಗಿದೆ. ಈ ನಡುವೆ ದೇಣಿಗೆ ನೀಡುವ ವಿಚಾರದಲ್ಲಿ ಚೀನಾ ತನ್ನ ಬಲಿಷ್ಠತೆಯನ್ನು ವಿಶ್ವಕ್ಕೆ ತೋರಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ WHOಗೆ ನೆರವನ್ನು ನೀಡುವುದಾಗಿ ಘೋಷಿಸಿದೆ.

ಈಗಾಗಲೇ 20 ಮಿಲಿಯನ್ ಡಾಲರ್ ನಷ್ಟು  ದೇಣಿಗೆ ನೀಡಿತ್ತು. ಜಾಗತಿಕವಾಗಿ ಕೋವಿಡ್ ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ಆರ್ಥಿಕ ನೆರವು ನೀಡಲು ನಿರ್ಧರಿಸಿರುವುದು ಅಮೆರಿಕಕ್ಕೆ ಸೆಡ್ಡು ಹೊಡೆಯಲು ಮುಂದಾದಂತಾಗಿದೆ. ಇದು ಒಳಗೊಳಗೆ ಅಮೆರಿಕದ ಕಣ್ಣನ್ನು ಕೆಂಪಾಗಿಸುತ್ತಿದೆ. ಆದರೂ ಅದೇನೆ ಇರಲಿ ವಿಶ್ವದ ಆರೋಗ್ಯ ದೃಷ್ಟಿಯಿಂದ ಚೀನಾ ತೆಗೆದುಕೊಂಡಿರುವ ನಿರ್ಧಾರ ಮೆಚ್ಚುವಂತದ್ದು.

ಜಾಗತಿಕವಾಗಿ ಕೋವಿಡ್ 19 ವಿರುದ್ಧ ಹೋರಾಡಲು, ಅಭಿವೃದ್ಧಿಶೀಲ ದೇಶಗಳ ಆರೋಗ್ಯ ವ್ಯವಸ್ಥೆ ಬಲಗೊಳಿಸುವ ನಿಟ್ಟಿನಲ್ಲಿ ಬೆಂಬಲ ನೀಡಲು ಈ ನೆರವು ನೀಡಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುಯಾಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೀನಾ ಸರ್ಕಾರದ ಮೇಲಿನ ವಿಶ್ವಾಸ, ಬೆಂಬಲದ ಪ್ರತಿಫಲನ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಜನರಿಗೆ ನೀಡಿರುವ ಕೊಡುಗೆಯಾಗಿದೆ ಎಂದು ಚೀನಾ ಬಣ್ಣಿಸಿದೆ.  ಅಲ್ಲದೇ ಎಲ್ಲರ ಆರೋಗ್ಯ ದೃಷ್ಟಿಯಿಂದ ಇದು ನಮ್ಮ ಅಲ್ಪ ಸಹಾಯ ಎಂದು ಹೇಳಿಕೊಂಡಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...