NEWSನಮ್ಮಜಿಲ್ಲೆ

ವೈದ್ಯರಿಗೆ ಸುರಕ್ಷತಾ ಪರಿಕರಗಳ ಕೊರತೆ ಇದೆ

ಕಳಪೆ ಮಾಸ್ಕ್ ಮಾರಾಟದ ವಿರುದ್ಧ ಕ್ರಮ l ಸಚಿವ ಬಿ.ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ವೈದ್ಯರಿಗೆ ಸುರಕ್ಷತಾ ಪರಿಕರಗಳ ಕೊರತೆ ಇರುವುದು ಗಮನದಲ್ಲಿದ್ದು, ಶೀಘ್ರದಲ್ಲಿ ಅವುಗಳನ್ನು ವೈದ್ಯರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡೀ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಿ ವ್ಯವಸ್ಥೆ ಮಾಡÀಲಾಗಿದ್ದು,ಏಳರಿಂದ ಎಂಟು ಸಾವಿರದ ಬೆಡ್‍ವ್ಯವಸ್ಥೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಸುರಕ್ಷತಾ ಪರಿಕರಗಳ ಕಿಟ್(ಪಿಪಿಇ)ಗಳ ಕೊರತೆಯಾಗುವುದು ಸಹಜ; ಇದು ನಮ್ಮ ಗಮನದಲ್ಲಿದ್ದು ಆದಷ್ಟು ವೈದ್ಯರಿಗೆ ಈ ಸುರಕ್ಷತಾ ಪರಿಕರ ಕಿಟ್ ಒದಗಿಸಿಕೊಡಲಾಗುವುದು ಎಂದು   ಭರವಸೆ ನೀಡಿದ್ದಾರೆ.

 350 ವೆಂಟಿಲೆಟರ್ಗಳಿಗೆ ಆರ್ಡರ್

ರಾಜ್ಯದಲ್ಲಿ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳು ಸೇರಿ 700 ವೆಂಟಿಲೇಟರ್‍ಗಳು ನಮ್ಮಲ್ಲಿವೆ; 350 ವೆಂಟಿಲೆಟರ್‍ಗಳ ಖರೀದಿಗೆ ಆರ್ಡ್‍ರ್ ನೀಡಲಾಗಿದ್ದು,ಅವುಗಳು ಬಂದಿರಬಹದು; ಪರಿಶೀಲಿಸಲಾಗುವುದು ಎಂದು ಹೇಳಿದ ಅವರು ಇದುವರೆಗೆ ವೆಂಟಿಲೆಟರ್ ಮೂಲಕ ಕೊರೊನಾ ಸೊಂಕಿತರಿಗೆ ಚಿಕಿತ್ಸೆ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸಮರ್ಪಕವಾಗಿ ಥರ್ಮಲ್ ಸ್ಕ್ಯಾನರ್‍ಗಳನ್ನು ಇಡೀ ರಾಜ್ಯದ ಎಲ್ಲೆಡೆ ಒದಗಿಸುವುದಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.

ಕಳಪೆ ಮಾಸ್ಕ್ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದು ಸೇರಿದಂತೆ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತಿದ್ದು,ಜನರು ಯಾವುದೇ ಕಾರಣಕ್ಕೂ ಕಳಪೆ ಮಾಸ್ಕ್ ಖರೀದಿಸಬಾರದು ಎಂದು ಅವರು ಮನವಿ ಮಾಡಿದರು. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ನಿನ್ನೆ ಚರ್ಚಿಸಲಾಗಿದ್ದು,ಅವರು ಇನ್ನೂ ಎರಡು ವಾರಗಳ ಕಾಲ ಹೋಮ್‍ಕ್ವಾರಂಟೈನ್ ಸಮರ್ಪಕವಾಗಿ ಮಾಡುವಂತೆ ತಿಳಿಸಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಎನ್-95 ಮಾಸ್ಕ್, ತ್ರೀಬಲ್ ಲೇಯರ್ ಮಾಸ್ಕ್, ಸುರಕ್ಷತಾ ಪರಿಕರಗಳ ಕಿಟ್, ವೆಂಟಿಲೇಟರ್,ಸ್ಯಾನಿಟೈಸರ್ ಅಗತ್ಯತೆ ಕುರಿತು ಅವರಿಗೆ ತಿಳಿಸಲಾಗಿತ್ತು; ಅವರು ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಕಳುಹಿಸಿಕೊಟ್ಟಿದ್ದು, ಅವುಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ 100 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಇದುವರೆಗೆ 100 ಜನರಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ, ಅದರಲ್ಲಿ 6 ಜನರು ಗುಣಮುಖರಾಗಿದ್ದು, ಮೂರು ಜನರು ಮೃತಪಟ್ಟಿದ್ದಾರೆ ಎಂದು ಸಚಿವ ಶ್ರೀರಾಮುಲು  ವಿವರಿಸಿದರು. 26 ಸಾವಿರ ಜನರನ್ನು ಗುರುತಿಸಿ ಅದರಲ್ಲಿ 3243 ಜನರ ಸ್ಯಾಂಪಲ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗಿ ಅದರಲ್ಲಿ 91 ಜನರಿಗೆ ಸೊಂಕು ಇರುವುದು ದೃಢಪಟ್ಟಿದೆ. 226 ಜನರು ಐಸೋಲೇಶಷನ್ ವಾರ್ಡ್‍ನಲ್ಲಿದ್ದಾರೆ ಎಂದು ಅವರು ವಿವರಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳು, ಟಾಸ್ಕ್‌ಫೋರ್ಸ್, ಮುಖ್ಯಮಂತ್ರಿಗಳು ಹಾಗೂ ನಾನೂ ಸಭೆ ನಡೆಸಿ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದೇವೆ. ಈ ಕೆಲಸದಲ್ಲಿ ನಿರತರಾಗಿರುವವರಲ್ಲಿ ಆತ್ಮಸ್ಥೈರ್ಯ,ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಹೊಸಪೇಟೆಯಲ್ಲಿ 3 ಪಾಸಿಟಿವ್

ಹೊಸಪೇಟೆಯಲ್ಲಿಯೂ ಮೂರು ಜನರಿಗೆ ಕೊರೊನಾ ಸೊಂಕು ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿದೆ. ಇಡೀ ನಗರವನ್ನು ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಸೊಂಕಿತರ ಮನೆಯ 5 ಕಿ.ಮೀ ಸುತ್ತ ಬಫರ್‍ಝೋನ್ ಆಗಿ ಮಾಡಲಾಗಿದೆ. ಅಲ್ಲಿ ಸೊಂಕು ವ್ಯಾಪಿಸದಂತೆ ಎಲ್ಲ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ ಎಂದು ವಿವರಿಸಿದರು.

ಅವರ ಟ್ರಾವೆಲ್ ಹಿಸ್ಟರಿ ಕಲೆಹಾಕಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ 59399 ಜನರಿಗೆ ತಪಾಸಣೆ ಮಾಡಲಾಗಿದ್ದು,ಅದರಲ್ಲಿ 57 ಜನರ ಸ್ಯಾಂಪಲ್ ಪ್ರಯೋಗಾಲಯದಿಂದ ಬಂದಿದ್ದು,ಅದರಲ್ಲಿ 3 ಜನರಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. 45 ಜನರಿಗೆ ನೆಗೆಟಿವ್ ಅಂತ ಬಂದಿದೆ. 9 ಜನರ ವರದಿ ಬರಬೇಕಿದ್ದು, 13 ಜನರನ್ನು ಐಸೋಲೇಶನ್ ವಾರ್ಡ್‍ನಲ್ಲಿಡಲಾಗಿದೆ. 216 ಜನರು 14 ದಿನಗಳ ಹೋಮ್‍ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ.9 ಜನರು 28 ದಿನಗಳ ಹೋಮ್ ಕ್ವಾರಂಟೈನ್ ಪೂರ್ಣಗೊಳಿಸಿದ್ದು, ಇನ್ನೂ 356 ಜನರು ಗೃಹಬಂಧನದಲ್ಲಿದ್ದಾರೆ ಎಂದು ವಿವರಿಸಿದರು.

ಕ್ವಾರಂಟೈನ್ ಸೆಂಟರ್‌ಗಳ ಗುರುತು

ಬಳ್ಳಾರಿ ಜಿಲ್ಲೆಯಲ್ಲಿ ಕ್ವಾರಂಟೈನ್ ಸೆಂಟರ್‌ಗಳನ್ನು ಈಗಾಗಲೇ ಗುರುತಿಸಿ ಅಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

ನಗರದ ಆರ್‍ವೈಎಂಇಸಿ ಕಾಲೇಜಿನಲ್ಲಿ 300 ಬೆಡ್‍ಗಳ ವ್ಯವಸ್ಥೆ,ವಿಮ್ಸ್ ದಂತ ವೈದ್ಯಕೀಯ ಕಾಲೇಜಿನಲ್ಲಿ 100, ಕಮಲಾಪುರದ ಮಯೂರ ಭುವನೇಶ್ವರಿ ಹೋಟಲ್‍ನಲ್ಲಿ 30, ಹಡಗಲಿಯ ಸರಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ 100, ಕೂಡ್ಲಿಗಿಯ ಎಸ್ಸಿ ಪೊಸ್ಟ್ ಮೆಟ್ರಿಕ್ ಹಾಸ್ಟೆಲ್‍ನಲ್ಲಿ 135 ಬೆಡ್‍ಗಳ ವ್ಯವಸ್ಥೆ ಸೇರಿದಂತೆ 635 ಬೆಡ್‍ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಟಿಬಿ ಸ್ಯಾನಿಟೋರಿಯಂ,ಜಿಲ್ಲಾಸ್ಪತ್ರೆ, ಪೃಥ್ವಿ ನರ್ಸಿಂಗ್ ಹೋಮ್‍ಗಳಲ್ಲಿ ಸೂಪರ್‍ವೈಸಡ್ ಐಸೋಲೇಶನ್ ಸೆಂಟರ್‍ಗಳನ್ನಗಿ ಗುರುತಿಸಲಾಗಿದೆ. ಬಳ್ಳಾರಿಯಲ್ಲಿ ತ್ರೀಪಲ್ ಲೇಯರ್ ಮಾಸ್ಕ್ 27,700, ಎನ್-95 -32 ಸಾವಿರ, ಪಿಪಿಇ-450,ಗ್ಲೌಸ್-70,600 ಲಭ್ಯವಿವೆ ಎಂದರು.

ಡಿಎಚ್‍ಒ ಡಾ.ಜನಾರ್ಧನ್, ಜಿಲ್ಲಾಶಸ್ತ್ರಚಿಕಿತ್ಸಕ ಬಸರೆಡ್ಡಿ ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ