CrimeNEWSನಮ್ಮಜಿಲ್ಲೆ

ಶಿಕ್ಷಕನಾಗುವ ಕನಸು ಕಂಡ ಯುವಕ: ಆಡಳಿತ ವ್ಯವಸ್ಥೆ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಶಿಕ್ಷಕನಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು ಎಂಬ ಕನಸು ಹೊತ್ತ ಯುವಕನೊಬ್ಬ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಬೇಸರಗೊಂಡು ಆಡಳಿತ ವ್ಯವಸ್ಥೆ ವಿರುದ್ಧ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿಕ್ಕ ಬೂದೂರಿನ ಯುವಕ ಚನ್ನಬಸವ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು. ಜಿಲ್ಲೆಯ ದೇವದುರ್ಗ ಪಟ್ಟಣದ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾನೆ.

ಬಹುಹಿಂದಿನಿಂದಲೇ ಶಿಕ್ಷಕನಾಗುವ ಕನಸು ಹೊತ್ತಿದ್ದ ಚನ್ನಬಸವ ಅದಕ್ಕಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದ. ಕಳೆದ ಬಾರಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಈ ಬಾರಿ ಆತನೇ ಫೇಲ್‌ ಆಗಿದ್ದ. ಹೀಗಾಗಿ ಅವನಿಗೆ ಭಾರಿ ಬೇಸರವಾಗಿತ್ತು ಎನ್ನಲಾಗಿದೆ.

2022ರ ಪಟ್ಟಿಯಲ್ಲಿದ್ದ ಹೆಸರು ಕೊನೆಗೆ ಮಿಸ್‌ ಆಗಿತ್ತು: ನಿಜವೆಂದರೆ, 6-8ನೇ ತರಗತಿ ಶಿಕ್ಷಕರ ಹುದ್ದೆಗೆ ಚನ್ನಬಸವ ಆಯ್ಕೆಯಾಗಿದ್ದ. 2022ರ ನೇಮಕಾತಿ ಲಿಸ್ಟ್‌ನಲ್ಲಿ ಅವನ ಹೆಸರು ಇತ್ತು. ಆದರೆ, ಕೊನೆ ಕ್ಷಣದಲ್ಲಿ ಲಿಸ್ಟ್ ನಿಂದ‌ ಹೆಸರು ಕೈ ತಪ್ಪಿತ್ತು.

ಬಳಿಕ ಮತ್ತೊಂದು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಚನ್ನಬಸವ ಈ ಬಾರಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಬಳಿಕ ಪ್ರತ್ಯೇಕ ರೂಮ್ ಮಾಡಿ ಪರೀಕ್ಷೆಗೆ ತಯಾರಿ‌ ನಡೆಸಿದ್ದ ಚನ್ನಬಸವ. ದೇವದುರ್ಗ ಪಟ್ಟಣದಲ್ಲೇ ರೂಮ್‌ ಮಾಡಿಕೊಂಡು ಸಿದ್ಧತೆ ನಡೆಸುತ್ತಿದ್ದ ಆತನಿಗೆ ಏನಾಯಿತೋ ಗೊತ್ತಿಲ್ಲ. ಒಮ್ಮಿಂದೊಮ್ಮೆಗೇ ತಾನು ಪ್ರೀತಿಸುತ್ತಿದ್ದ ಶಾಲೆಯ ಆವರಣದ ಮರದ ಬಳಿ ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.

ಇದಕ್ಕೂ ಮುನ್ನ ಆಡಳಿತ ವ್ಯವಸ್ಥೆ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರೋ ಮಾಡಿದ ತಪ್ಪಿಗೆ ವ್ಯವಸ್ಥೆ ನನಗೆ ಶಿಕ್ಷೆ ನೀಡಿದೆ. ಆಡಳಿತ ವ್ಯವಸ್ಥೆಗೆ ನನ್ನ ಧಿಕ್ಕಾರವಿರಲಿ ಎಂದು ಡೆತ್ ನೋಟ್‌ನಲ್ಲಿ ತನ್ನ ನೋವನ್ನು ಹೊರಹಾಕಿದ್ದಾನೆ.

ಇನ್ನು ಯಾರೂ ಕೂಡಾ ಯಾರ ವಿರುದ್ಧವೂ ದೂರು ನೀಡಬಾರದು ಎಂದೂ ಮನವಿ ಮಾಡಿದ್ದಾನೆ. ನನ್ನ ಕುಟುಂಬ ಅನಕ್ಷರಸ್ಥ. ಹೀಗಾಗಿ ಅವರನ್ನು ಬಳಸಿಕೊಂಡು ಯಾರಾದರೂ ದೂರು ನೀಡಲೂಬಹುದು. ಅದನ್ನೂ ಪರಿಗಣಿಸಬಾರದು ಎಂದು ಕೂಡಾ ಡೆತ್‌ ನೋಟ್‌ನಲ್ಲಿ ಮನವಿ ಮಾಡಿದ್ದಾನೆ.

ಕಳೆದ ಬಾರಿ ಆಯ್ಕೆ ಪಟ್ಟಿಯಲ್ಲಿ ಬಂದ ಹೆಸರನ್ನು ಬದಲಿಸಲಾಗಿದೆ ಎನ್ನುವ ನೋವು ಆತನನ್ನು ಗಾಢವಾಗಿ ಕಾಡುತ್ತಿತ್ತೇನೋ. ಅಲ್ಲದೆ ಈ ವ್ಯವಸ್ಥೆ ತನಗೆ ಬಗೆದ ದ್ರೋಹವೆಂದು ನೋವು ಅನುಭವಿಸುತ್ತಿದ್ದನೇನೋ ಗೊತ್ತಿಲ್ಲ. ಆದರೆ, ಮಕ್ಕಳ ಭವಿಷ್ಯ ರೂಪಿಸಬೇಕಾದ ಯುವಕ ತನ್ನ ಭವಿಷ್ಯವನ್ನೇ ಕೊನೆಗಾಣಿಸಿಕೊಂಡಿರುವುದು ದರಂತವೇ ಸರಿ. ಘಟನೆ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು