NEWSದೇಶ-ವಿದೇಶಶಿಕ್ಷಣ-

ಶಿಕ್ಷಕರ ದಿನಾಚರಣೆ: ತಾಯಿ ನಮಗೆ ಜನ್ಮ ನೀಡಿದ್ರೆ, ಗುರು ಜೀವನ ನೀಡುತ್ತಾರೆ – ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  2023ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಇಂದು  75 ಶಿಕ್ಷಕರಿಗೆ  ಪ್ರದಾನ ಮಾಡಲಾಗುತ್ತಿದೆ. ಇದಕ್ಕೂ ಮುನ್ನ ಅಂದರೆ ಸೋಮವಾರ ಪ್ರಧಾನಿ ಮೋದಿಯವರು ಪ್ರಶಸ್ತಿ ವಿಜೇತ ಶಿಕ್ಷಕರ  ಜತೆ ಸಂವಾದ ನಡೆಸಿದರು.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತ ಶಿಕ್ಷಕರ ಜತೆ ಸಂವಾದ ನಡೆಸಿದ ಮೋದಿ ಅವರು ಎಲ್ಲರಿಗೂ ಸ್ವಾಗತ ಕೋರಿದರು. ಈ ವೇಳೆ ತಾಯಿ ನಮಗೆ ಜನ್ಮ ನೀಡಿದ್ರೆ, ಗುರು ನಮಗೆ ಜೀವನ ನೀಡುತ್ತಾರೆ ಎಂದು ಹೇಳಿದ್ದಾರೆ. ಜತೆಗೆ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ಮೋದಿ ಸಮಾಧಾನಕರವಾಗಿಯೇ ಉತ್ತರ ನೀಡಿದರು.

ಇನ್ನು ದೇಶ ನಿರ್ಮಾಣದಲ್ಲಿ ಶಿಕ್ಷಕರ ಕೆಲಸ ಪ್ರಮುಖವಾಗಿದೆ. ನೀವು ಇಡೀ ದೇಶವನ್ನೇ ಬದಲಾವಣೆ ಮಾಡಬಹುದು. ಟೀಚರ್ಸ್​ ನಿತ್ಯ ಮಕ್ಕಳಿಗೆ ಕ್ಯೂರಿಯಾಸಿಟಿ ಕೊಡುತ್ತಿರಬೇಕು. ಅವರಿಗೆ ಪ್ರೋತ್ಸಾಹ ಹೆಚ್ಚಿಗೆ ನೀಡಬೇಕು ಎಂದು ಹೇಳಿದರು.

ಶಾಲೆಯಲ್ಲಿ ಮಕ್ಕಳ ಓದು, ಬರಹ ಹೇಗಿರುತ್ತೆ ಎಂಬುದರ ಬಗ್ಗೆ ಚರ್ಚೆ ಮಾಡಿದರು. ಸಮಾಲೋಚನೆಯ ನಡುವೆ ಆಗಾಗ ನಗುವಿನ ಅಲೆ ತೇಲಿ ಬಂತು. ಸಭೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಇದ್ದರು.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75 ಶಿಕ್ಷಕರಿಗೆ 2023ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಇನ್ನು ಭಾರತದ ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅವರ ಹುಟ್ಟುಹಬ್ಬದ ಆಚರಣೆಯನ್ನು ದೇಶಾದ್ಯಂತ ಶಿಕ್ಷಕರ ದಿನಚರಣೆ ಎಂದು ಆಚರಣೆ ಮಾಡಲಾಗುತ್ತದೆ. ಇವರು ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ಸೆಪ್ಟೆಂಬರ್​ 5 ರಂದು ಜನಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು