NEWSನಮ್ಮರಾಜ್ಯಸಂಸ್ಕೃತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟ : ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶ ಕಂಡ ಅಪರೂಪದ ಸಂತ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಕ್ಷಕ್ಷ ಪೃಥ್ವಿ ರೆಡ್ಡಿ ಸಂತಾಪ ಸೂಚಿಸಿದ್ದಾರೆ.

“ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಮನುಕುಲವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಜೀವನ ಪರ್ಯಂತ ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಹಾಗೂ ಅಪಾರ ಜ್ಞಾನವು ನಮಗೆಲ್ಲರಿಗೂ ಮಾದರಿಯಾಗಬೇಕಿದೆ. ಅತ್ಯಂತ ಸರಳ ಜೀವನವನ್ನು ಅನುಸರಿಸಿದ ಅವರು ನಡೆಗೂ ನುಡಿಗೂ ಅಂತರವಿಲ್ಲದಂತೆ ಬದುಕಿದ್ದರು. ಸಮಾಜಕ್ಕೆ ಸ್ಫೂರ್ತಿಯಾಗುವಂತೆ ಜೀವನದ ಪ್ರತಿಕ್ಷಣವನ್ನೂ ಕಳೆಯುತ್ತಿದ್ದ ಸ್ವಾಮೀಜಿಯವರು ನಮ್ಮೊಂದಿಗೆ ಇನ್ನೂ ಹಲವು ವರ್ಷಗಳು ಇರಬೇಕಿತ್ತು” ಎಂದ ಪೃಥ್ವಿ ರೆಡ್ಡಿ ಕಣ್ಣಾಲಿಗಳು ತೇವವಾದವು.

“ಕಠಿಣವಾದ ವಿಷಯಗಳನ್ನೂ ಅತ್ಯಂತ ಸರಳವಾಗಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಹೇಳುವ ಕೌಶಲ್ಯತೆ ಸಿದ್ದೇಶ್ವರ ಸ್ವಾಮೀಜಿಯವರಿಗೆ ಇತ್ತು. ಅವರ ಮಧುರವಾದ ಮಾತು, ಪ್ರಖರ ವಿಷಯ ಹಾಗೂ ಪ್ರಬುದ್ಧ ಚಿಂತನೆಯು ಎಂತಹವರನ್ನೂ ಆಕರ್ಷಿಸುತ್ತಿತ್ತು. ಅಧ್ಯಾತ್ಮದ ಜೊತೆಗೆ ವಿಜ್ಞಾನ, ಕೃಷಿ, ಶಿಕ್ಷಣ, ಪರಿಸರಕ್ಕೆ ಸಂಬಂಧಿಸಿದ ವಿಚಾರಗಳಲ್ಲೂ ಅವರು ಆಸಕ್ತಿ ಹೊಂದಿದ್ದರು. ಗಿಡಗಳಿಂದ ಹೆಚ್ಚು ಹೂವುಗಳನ್ನು ಕೀಳಬಾರದೆಂದು ಕೇವಲ ಒಂದೇ ಹೂವಿನಿಂದ ದೇವರನ್ನು ಪೂಜಿಸುತ್ತಿದ್ದ ಅವರದ್ದು ಹೂವಿನಷ್ಟೇ ಸೂಕ್ಷ್ಮವಾದ ಮನಸ್ಸಾಗಿತ್ತು” ಎಂದು ತಿಳಿಸಿದರು.

“ಸಿದ್ದೇಶ್ವರ ಸ್ವಾಮೀಜಿಯವರು ಜೀವನದುದ್ದಕ್ಕೂ ಅದ್ಭುತ ಸಾಧನೆ ಮಾಡಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದರೂ, ಸಾಮಾನ್ಯರಲ್ಲಿ ಸಾಮಾನ್ಯರಂತೆ ಜನರೊಂದಿಗೆ ಬೆರೆಯುತ್ತಿದ್ದರು. ಐಶಾರಾಮಿ ಉಡುಗೊರೆ, ಪ್ರಶಸ್ತಿಗಳನ್ನೆಲ್ಲ ತಿರಸ್ಕರಿಸಿ ಬದುಕಿದ್ದ ಅವರು ನಿಜಕ್ಕೂ ನಡೆದಾಡುವ ದೇವರು. ಅವರ ಅಪಾರ ಸಂಖ್ಯೆಯ ಭಕ್ತರು, ಅಭಿಮಾನಿಗಳಿಗೆ ಅವರ ನಿಧನದ ದುಃಖವನ್ನು ನೀಗಿಸಿಕೊಳ್ಳುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು