NEWSಶಿಕ್ಷಣ-

ಶಾಲೆಗೆ ಮಕ್ಕಳ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಒಂದೂವರೆ ವರ್ಷದ ಬಳಿಕ ಮತ್ತೆ ಶಾಲೆಗಳು ಇಂದಿನಿಂದ ಆರಂಭವಾಗಿದ್ದು, ಮಕ್ಕಳು ಖುಷಿಯಿಂದಲೇ ಶಾಲೆಗೆ ಬರುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ನಗರದ ಮಲ್ಲೇಶ್ವರಂ  ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ಭೌತಿಕ ತರಗತಿಗಳ ಪ್ರಾರಂಭಕ್ಕೆ ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.

ಈ ವೇಳೆ ಮಕ್ಕಳೊಂದಿಗೆ  ಮಾತನಾಡಿ ಅವರ ಖುಷಿಯನ್ನು ಆನಂದಿಸಿದರು. ಅಲ್ಲದೆ ಮಕ್ಕಳು ಶಾಲೆ ತೆರೆದಿರುವುದಕ್ಕೆ ಅಭಿನಂದನೆ ತಿಳಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂದಿನಿಂದ ಶಾಲೆಗಳು ಶುರುವಾಗಿರುವುದಕ್ಕೆ ಮಕ್ಕಳು ಮತ್ತು ಶಿಕ್ಷಕರು ಬಹಳ ಸಂತೋಷ ಪಡುತ್ತಿದ್ದಾರೆ. ಅವರಂತೆ ನನಗೂ ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.

ನಮ್ಮ ಮಕ್ಕಳು ಇಲ್ಲಿಯವರೆಗೆ ಅನುಭವಿಸಿದ ಸಮಸ್ಯೆ ಇನ್ನು ಮುಂದೆ ಬರದಂತೆ ನೋಡಿಕೊಳ್ಳುತ್ತೇವೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲೂ ನಾವು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಶಿಕ್ಷಣ ತಜ್ಞರೊಂದಿಗೂ ಚರ್ಚಿಸಿದ್ದು ಅವರ ಸಲಹೆ ಮೇರೆಗೆ ಶಾಲೆ – ಕಾಲೇಜುಗಳನ್ನು ಆರಂಭಿಸಲಾಗಿದೆ. ಹೀಗಾಗಿ ಯಾರು ಆತಂಕಕ್ಕೆ ಒಳಗಾಗದೆ ಶಾಲೆಗೆ ಬಂದು ಕಲಿಕೆ ಮುಂದುವರಿಸಿ ಎಂದು ಕಿವಿ ಮಾತು ಹೇಳಿದರು.

ಇನ್ನು ಶಿಕ್ಷಕರೂ ಕೂಡ ಶಾಲೆಗಳನ್ನು ತೆರೆದಿರುವುದಕ್ಕೆ ಆನಂದ ಭಾಷ್ಪ, ಉಕ್ಕಿದ ಭಾವೋದ್ವೇಗ ಕಾಣುತ್ತಿತ್ತು. ಇನ್ನು ರಾಜ್ಯದ ಎಲ್ಲ ಶಾಲೆಗಳು ತೆರೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಯಾಯ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡುತ್ತಿದ್ದು, ಎಲ್ಲವನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂತಸ ಪಡುತ್ತಿದ್ದಾರೆ.

ಸಿಎಂ ಜತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌,  ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್‌ ನಾರಾಯಣ ಮತ್ತಿತರರು  ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು