CrimeNEWSನಮ್ಮರಾಜ್ಯಸಿನಿಪಥ

ಶಿಶ್ನ, ಹಸ್ತಮೈಥುನ ಫೋಟೋ ವಿಡಿಯೋ ಕಳಿಸಿದ್ದ- ರೇಣುಕಾಸ್ವಾಮಿ ವಿರುದ್ಧ FIR ಕೂಡ ದಾಖಲಾಗಿತ್ತು: ನಟಿ ಚಿತ್ರಾಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟಿ ಪವಿತ್ರಾ ಗೌಡಗೆ ಪದೇಪದೆ ಅಶ್ಲೀಲ ಫೋಟೋ ಮತ್ತು ವಿಡಿಯೋ ಕಳುಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಸುಮಾರು 17 ಮಂದಿಯನ್ನು ಬಂಧಿಸಲಾಗಿದೆ.

ಇದರ ನಡುವೆ ಫೇಕ್‌ ಅಕೌಂಟ್‌ಗಳ ಮೂಲಕ ಮೆಸೇಜ್‌ ಕಳುಹಿಸುತ್ತಿದ್ದ ಎಂದು ಮತ್ತೊಬ್ಬ ಕಿರುತೆರೆ ನಟಿ ಚಿತ್ರಾಲ್ ರಂಗಸ್ವಾಮಿ ವಿಡಿಯೋ ಮಾಡಿದ್ದು, ಹತ್ಯೆಯಾದ ವ್ಯಕ್ತಿ ಕಾಮುಕ ಆತ ಅಶ್ಲೀಲ ಫೋಟೋ ಮತ್ತು ವಿಡಿಯೋ ಕಳುಹಿಸಿ ಸ್ತ್ರೀಯರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎಂಬುವುದು ಸ್ಪಷ್ಟವಾಗುತ್ತಿದೆ.

ಇನ್ನು ರೇಣುಕಾಸ್ವಾಮಿ ಕುಟುಂಬಕ್ಕೆ ದೇವರು ಆದಷ್ಟು ಶಕ್ತಿ ಕೊಡಲಿ. ಮಾರ್ಚ್‌ ತಿಂಗಳಿನಲ್ಲಿ ರೇಣುಕಾಸ್ವಾಮಿ ಎಂಬ ವ್ಯಕ್ತಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಏಕೆಂದರೆ ಮೂರ್ನಾಲ್ಕು ಹೆಣ್ಣು ಮಕ್ಕಳಿಗೆ ಅದೇ ರೀತಿ ಮೆಸೇಜ್ ಮಾಡುತ್ತಿದ್ದಾನೆ ಎಂದು.

ಆತನ ಖಾತೆಯ ಹೆಸರು ಗೌತಮ್ ಎಂದಿತ್ತು. ನನಗೆ ಶಿಶ್ನದ ಫೋಟೋ, ಹಸ್ತಮೈಥುನ ಮಾಡಿಕೊಳ್ಳುವ ಫೋಟೋ ಅಥವಾ ವಿಡಿಯೋ ಬಂದ್ರೆ ತಕ್ಷಣವೇ ಡಿಲೀಟ್ ಮಾಡುತ್ತೀನಿ. ಈ ಅಕೌಂಟ್ ಹೆಸರನ್ನು ನೋಡಿದಾಗ ಎಲ್ಲೋ ನೋಡಿದ್ದೀನಿ ಅಂತ ನೆನಪಾಗಿ ನನ್ನ ಬ್ಲಾಕ್‌ ಲಿಸ್ಟ್‌ ಓಪನ್ ಮಾಡಿ ನೋಡಿದಾಗ ರೇಣುಕಾಸ್ವಾಮಿ ಅಕೌಂಟ್ ಇದೆ ಎಂದು ಚಿತ್ರಾಲ್ ಮಾತನಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಇಷ್ಟು ದಿನ ನಾನು ಯಾಕೆ ಶೇರ್ ಮಾಡಿರಲಿಲ್ಲ ಅಂದ್ರೆ ಇದನ್ನು ನೋಡಿ ನನಗೆ ಶಾಕ್ ಆಗಿತ್ತು ಹಾಗೂ ಇದನ್ನು ಸ್ಟೋರಿಯಲ್ಲಿ ಶೇರ್ ಮಾಡಿ ರಿಪೋರ್ಟ್ ಮಾಡಿ ಎನ್ನಲು ಆಗಲ್ಲ. ಏಕೆಂದರೆ ಇನ್‌ಸ್ಟಾಗ್ರಾಂ ಅನುಮತಿ ನೀಡುವುದಿಲ್ಲ. ಬೆತ್ತಲೆ ಫೋಟೋ ಕಳುಹಿಸುವುದು ಅಥವಾ ಟಾಪಿಕ್ ಡ್ರಾಗ್ ಮಾಡುವವರನ್ನು ನಾನು ಬ್ಲಾಕ್ ಮಾಡುತ್ತೀನಿ.

ಇನ್ನು ನಿಮ್ಮ ಬ್ಲಾಕ್‌ ಲಿಸ್ಟ್‌ನಲ್ಲಿ ಈ ವ್ಯಕ್ತಿ ಇದ್ರೆ ಚೆಕ್ ಮಾಡಿಕೊಳ್ಳಿ. ಮನೆಯಲ್ಲಿ ಅಷ್ಟು ಚೆನ್ನಾಗಿರುವ ಹೆಂಡತಿ ಇದ್ರು ಇವೆಲ್ಲಾ ಯಾಕೆ ಬೇಕ? ಸೋಷಿಯಲ್ ಮೀಡಿಯಾದಲ್ಲಿ ಇವೆಲ್ಲಾ ಕಾಮನ್ ಎಂದು ಅನೇಕರು ಅಂದುಕೊಳ್ಳುತ್ತಾರೆ. ಆದರೆ ಆ ರೀತಿ ಮೆಸೇಜ್‌ಗಳನ್ನು ನೋಡಿದಾಗ ಥು ಅನಿಸುತ್ತದೆ.

ಇಲ್ಲಿ ನಾನು ಯಾರಿಗೂ ಸಪೋರ್ಟ್ ಮಾಡುತ್ತಿಲ್ಲ ಆ ವ್ಯಕ್ತಿಯಿಂದ ಸಮಸ್ಯೆ ಆಗಿದೆ ಅಂದ್ಮೇಲೆ ನಾನು ಬ್ಲಾಕ್ ಮಾಡುತ್ತಿರುವೆ. ಬೇರೆ ಬೇರೆ ಖಾತೆಗಳಿಂದ ಸಾಕಷ್ಟು ಮೆಸೇಜ್ ಬರುತ್ತಿದೆ ಅದನ್ನು ಗಮನಿಸುತ್ತಿರುವೆ ಅದು ಕೂಡ ಬ್ಲಾಕ್ ಮಾಡುವೆ. ನಾವು ಏನೇ ಮಾತನಾಡಿದರೂ ನನ್ನನ್ನು ಜಡ್ಜ್‌ ಮಾಡುತ್ತಾರೆ. ಆದರೆ ಇದನ್ನು ತಿಳಿಸಲೇ ಬೇಕಿತ್ತು ಹೀಗಾಗಿ ಜನರಿಗೆ ತಿಳಿಸುತ್ತಿರುವೆ ಎಂದು ಚಿತ್ರಾಲ್ ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ