CrimeNEWSರಾಜಕೀಯ

ಶಾಸಕರ ಕಾರು ಭಸ್ಮ ಪ್ರಕರಣ: ಕೆದಕಿದಷ್ಟು ರೋಚಕ ವಿಷಯಗಳು ಬಯಲಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕೆದಕಿದಷ್ಟು ರೋಚಕ ವಿಷಯಗಳು ಬಯಲಿಗೆ ಬರುತ್ತಿವೆ.

ಆಗಸ್ಟ್ 12 ರಾತ್ರಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ 2 ಕಾರ್‌ಗೆ ಬೆಂಕಿ ಹಚ್ಚಲಾಗಿತ್ತು. ಈ ಸಂಬಂಧ ಒಂದೆಡೆ ಖಾಕಿ ಆರೋಪಿಗಳ ಹುಡುಕಾಟದಲ್ಲಿ ನಿರತವಾಗಿದ್ದರೆ, ಇತ್ತ ಪಕ್ಕದ ರೋಡಲ್ಲೇ ಆರೋಪಿಗಳ ರೌಂಡ್ಸ್ ಹೊಡೆಯುತ್ತಿದ್ದಾರೆ.

ಮಧ್ಯರಾತ್ರಿ ಸುಮಾರು 1:30ಕ್ಕೆ ಬೆಂಕಿ ಹಚ್ಚಿ, 2:30ಕ್ಕೆ ಪಕ್ಕದ ರಸ್ತೆಯಲ್ಲೇ ಇದ್ದರಂತೆ. ಮನೆ ಮುಂದಿರೋ ಬೈಕ್‍ಗಳ ಕಳ್ಳತನಕ್ಕೆ ಆರೋಪಿಗಳು ಸರ್ಕಸ್ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

2:32ಕ್ಕೆ ಪ್ಲಾಟಿನಾ ಬೈಕ್ ಕದ್ದು ಆರೋಪಿಗಳು ಕಾಲ್ಕಿತ್ತಿದ್ದಾರೆ. ಆರೋಪಿಗಳ ಬೈಕ್ ಕಳ್ಳತನದ ಫುಲ್‍ಸೀನ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದಲ್ಲ, ಎರಡಲ್ಲ 80 ಸಿಸಿ ಕ್ಯಾಮರಾದಲ್ಲಿ ಆರೋಪಿಗಳ ಚಲನವಲನಗಳು ಸೆರೆಯಾಗಿದೆ. ಇದುವರೆಗೆ 50ಕ್ಕೂ ಹೆಚ್ಚು ಸಿಸಿಕ್ಯಾಮರಾಗಳ ಪರಿಶೀಲನೆ ಮಾಡಲಾಗಿದೆ.

ಇನ್ನು ಈ ನಡುವೆ ಶಾಸಕ ಸತೀಶ್‌ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಆ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದು, ಅದನ್ನು ಪೊಲೀಸರು ಶೀಘ್ರದಲ್ಲೇ ಬಯಲು ಮಾಡಲಿದ್ದಾರೆ.

ಜತೆಗೆ ಈ ಪ್ರಕರಣ ಸಂಬಂಧ ನನಗೂ ಅನುಮಾನವಿದ್ದು, ಈ ಬಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಅವರಿಗೆ ವಿಷಯ ತಿಳಿಸುತ್ತೇನೆ ಎಂದು ಹೇಳಿದರು.

ಇನ್ನು ಆರೋಪಿಗಳಲ್ಲಿ ಒಬ್ಬ ವಿದೇಶಿಗ ಆತ ನನ್ನನ್ನು ಭೇಟಿ ಮಾಡಲು ಬಂದಿಲ್ಲ. ಆ ಮೂವರು ಕೇಬಲ್‌ನಲ್ಲಿ ಕೆಲಸ ಮಡುತ್ತಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ನಮ್ಮ ಕ್ಷೇತ್ರದಲ್ಲಿ ಕಾನೂನು ಬಾಹೀರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದಿರುವುದು ಈ ಕೃತ್ಯ ಎಸಗಲು ಕಾರಣ ಇರಬಹುದೇನೋ ಎಂಬ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದ್ದಾರೆ.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು