NEWSನಮ್ಮರಾಜ್ಯರಾಜಕೀಯ

ಶಾಸಕ ಅಖಂಡ ಶ್ರೀನಿವಾಸ್‌ ಸಹೋದರಿ ಗಗನ ಸುಕನ್ಯಾ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯೆ ಗಗನ ಸುಕನ್ಯಾ ಅವರು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಗನ ಸುಕನ್ಯಾ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಸ್ವಾಗತಿ ಮಾತನಾಡಿದ ಪೃಥ್ವಿ ರೆಡ್ಡಿ, ಕೋಲಾರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಗಗನ ಸುಕನ್ಯಾ ಅವರು ಜನರ ಕಷ್ಟಗಳಿಗೆ ನಿರಂತರವಾಗಿ ನೆರವಾಗುತ್ತಾ ಬಂದಿದ್ದಾರೆ ಎಂದರು.

ಇನ್ನು ಕೋವಿಡ್‌ ಸಂದರ್ಭದಲ್ಲಿ ರೇಷನ್‌ ಕಿಟ್‌ ವಿತರಣೆಮಾಡಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್‌ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಬ್ಯಾಗ್‌ಗಳು, ನೋಟ್‌ ಪುಸ್ತಕಗಳನ್ನು ವಿತರಿಸಿದ್ದಾರೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಪರಿಚಯಿಸಿದರು.

“ಗಗನ ಸುಕನ್ಯಾ ಅವರು ಕೋಲಾರ ಜಿಲ್ಲಾ ಸಹಕಾರಿ ಒಕ್ಕೂಟದ ಚುನಾಯಿತ ನಿರ್ದೇಶಕರಾಗಿ, ಜಿಲ್ಲೆಯ ನೂರಾರು ಮಹಿಳೆಯರನ್ನು ಸಹಕಾರಿ ಕ್ಷೇತ್ರಕ್ಕೆ ಕರೆತಂದಿದ್ದಾರೆ. ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದ ಇವರು ಬಿಜೆಪಿಯ ರಾಜ್ಯ ಪರಿಶಿಷ್ಟ ಜಾತಿ ಘಟಕದ ಕಾರ್ಯದರ್ಶಿಯಾಗಿ ಐದು ವರ್ಷ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ.

ಕಳೆದ ಒಂಬತ್ತು ವರ್ಷಗಳಿಂದ ಕೆಇಆರ್‌ಸಿ, ಬೆಸ್ಕಾಂ, ಸಿಜಿಆರ್‌ಎಫ್‌ ಸಂಸ್ಥೆಗಳ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಅನುಭವಿ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಪಕ್ಷ ಸೇರಿ ಮಾತನಾಡಿದ ಗಗನ ಸುಕನ್ಯಾ, ಕೋಲಾರ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ರಾಜಕಾರಣಿಗಳು ಗೆಲುವು ಸಾಧಿಸಿ ಅವರು ಮಾತ್ರ ಅಭಿವೃದ್ಧಿಯಾಗಿದ್ದಾರೆಯೇ ವಿನಃ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿಲ್ಲ. ಕೋಲಾರ ಜಿಲ್ಲೆಯ ಜನಸಾಮಾನ್ಯರಿಗೆ ಗುಣಮಟ್ಟದ ಮೂಲ ಸೌಕರ್ಯಗಳು ದೊರೆಯಬೇಕು ಹಾಗೂ ಇಲ್ಲಿನ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅಭಿವೃದ್ಧಿಯಾಗಬೇಕು.

ಇವೆಲ್ಲ ಸಾಧ್ಯವಾಗಬೇಕೆಂದರೆ ಈ ಭಾಗದಲ್ಲಿ ಆಮ್‌ ಆದ್ಮಿ ಪಾರ್ಟಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆ ಗೆಲುವು ಸಾಧಿಸಿ, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಈ ಸಂಕಲ್ಪದೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಕೋಲಾರದ ಮಾಜಿ ಸಂಸದ ಹಾಗೂ ಎಎಪಿ ಮುಖಂಡ ಡಾ.ವೆಂಕಟೇಶ್, ಕೋಲಾರದ ಎಎಪಿ ಜಿಲ್ಲಾಧ್ಯಕ್ಷ ಸುರೇಶ್‌ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಎಎಪಿ ಸ್ಪರ್ಧಾಕಾಂಕ್ಷಿ ದಿಲ್‌ ನವಾಜ್‌ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು