NEWSಸಂಸ್ಕೃತಿ

ಷಬ್‌-ಎ-ಬರಾತ್‌ : ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 9 ರಂದು ಮುಸ್ಲಿಂ ಸಮುದಾಯದ ಪವಿತ್ರ ರಾತ್ರಿ ಎಂದು ಆಚರಿಸಲಾಗುವ ಷಬ್‌-ಎ-ಬರಾತ್‌ ದಿನ ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್‌ ಜೆ ಗದ್ಯಾಲ್‌ ತಿಳಿಸಿದ್ದಾರೆ.

ಇಸ್ಲಾಮಿಕ್‌ ಕ್ಯಾಲೆಂಡರ್‌ ಪ್ರಕಾರ ಷಬ್‌-ಎ ಬರಾತ್‌ ಅನ್ನು ಒಂದು ಪವಿತ್ರ ರಾತ್ರಿ ಎಂದು ಆಚರಿಸಲಾಗುತ್ತದೆ. ಜಗತ್ತಿನ ಎಲ್ಲ ಭಾಗದ ಮುಸ್ಲಿಮರು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸುವ ಈ ಸಂದರ್ಭದಲ್ಲಿ ಇಡೀ ರಾತ್ರಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಸೇರಿ ಪ್ರಾರ್ಥಿಸಲಾಗುತ್ತದೆ.

ಈ ವರ್ಷ  ಷಬ್‌ ಎ ಬರಾತ್‌ ಏಪ್ರಿಲ್‌ 9, 2020ರಂದು ಬಂದಿದೆ. ಆದರೆ ಕೋವಿಡ್‌ 19 ವ್ಯಾಪಕವಾಗಿ ವ್ಯಾಪಿಸುತ್ತಿರುವುದರಿಂದ ಕರ್ನಾಟಕ ಸರ್ಕಾರವು ನೀಡಿರುವ ವಿವಿಧ ಆದೇಶಗಳಾನುಸಾರ ಸಾಮೂಹಿಕ ಪ್ರಾರ್ಥನೆಗಳನ್ನು ಅಮಾನತುಮಾಡಲಾಗಿ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇಮಾರತ್‌-ಎ-ಶರಿಯಾ ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದ್ದು, ಎಲ್ಲಾ ಮುಸಲ್ಮಾನರು ಷಬ್‌ ಎ ಬರತ್‌ ದಿನ ಇವುಗಳನ್ನು ಅನುಸರಿಸಲು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಧಾರ್ಮಿಕ ಆಚರಣೆಗಳನ್ನು ಖಬರಸ್ತಾನ್‌/ದರ್ಗಾಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಖಬರಸ್ತಾನ್‌/ದರ್ಗಾಗಳ ಪ್ರವೇಶ ದ್ವಾರಗಳ ಮುಚ್ಚಿರಬೇಕು ಎಂದು ಸೂಚಿಸಿದ್ದಾರೆ.

ಖಬರಸ್ತಾನ/ದರ್ಗಾಗಳ ಆಡಳಿತ ಮಂಡಳಿಗಳು ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ