NEWSಸಂಸ್ಕೃತಿ

ಷಬ್‌-ಎ-ಬರಾತ್‌ : ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 9 ರಂದು ಮುಸ್ಲಿಂ ಸಮುದಾಯದ ಪವಿತ್ರ ರಾತ್ರಿ ಎಂದು ಆಚರಿಸಲಾಗುವ ಷಬ್‌-ಎ-ಬರಾತ್‌ ದಿನ ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್‌ ಜೆ ಗದ್ಯಾಲ್‌ ತಿಳಿಸಿದ್ದಾರೆ.

ಇಸ್ಲಾಮಿಕ್‌ ಕ್ಯಾಲೆಂಡರ್‌ ಪ್ರಕಾರ ಷಬ್‌-ಎ ಬರಾತ್‌ ಅನ್ನು ಒಂದು ಪವಿತ್ರ ರಾತ್ರಿ ಎಂದು ಆಚರಿಸಲಾಗುತ್ತದೆ. ಜಗತ್ತಿನ ಎಲ್ಲ ಭಾಗದ ಮುಸ್ಲಿಮರು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸುವ ಈ ಸಂದರ್ಭದಲ್ಲಿ ಇಡೀ ರಾತ್ರಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಸೇರಿ ಪ್ರಾರ್ಥಿಸಲಾಗುತ್ತದೆ.

ಈ ವರ್ಷ  ಷಬ್‌ ಎ ಬರಾತ್‌ ಏಪ್ರಿಲ್‌ 9, 2020ರಂದು ಬಂದಿದೆ. ಆದರೆ ಕೋವಿಡ್‌ 19 ವ್ಯಾಪಕವಾಗಿ ವ್ಯಾಪಿಸುತ್ತಿರುವುದರಿಂದ ಕರ್ನಾಟಕ ಸರ್ಕಾರವು ನೀಡಿರುವ ವಿವಿಧ ಆದೇಶಗಳಾನುಸಾರ ಸಾಮೂಹಿಕ ಪ್ರಾರ್ಥನೆಗಳನ್ನು ಅಮಾನತುಮಾಡಲಾಗಿ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇಮಾರತ್‌-ಎ-ಶರಿಯಾ ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದ್ದು, ಎಲ್ಲಾ ಮುಸಲ್ಮಾನರು ಷಬ್‌ ಎ ಬರತ್‌ ದಿನ ಇವುಗಳನ್ನು ಅನುಸರಿಸಲು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಧಾರ್ಮಿಕ ಆಚರಣೆಗಳನ್ನು ಖಬರಸ್ತಾನ್‌/ದರ್ಗಾಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಖಬರಸ್ತಾನ್‌/ದರ್ಗಾಗಳ ಪ್ರವೇಶ ದ್ವಾರಗಳ ಮುಚ್ಚಿರಬೇಕು ಎಂದು ಸೂಚಿಸಿದ್ದಾರೆ.

ಖಬರಸ್ತಾನ/ದರ್ಗಾಗಳ ಆಡಳಿತ ಮಂಡಳಿಗಳು ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸಲಾಗಿದೆ.

Leave a Reply