NEWSನಮ್ಮರಾಜ್ಯಸಂಸ್ಕೃತಿ

ಸಂಕಷ್ಟದಲ್ಲಿದ್ದಾರೆ ಪ್ರವಾಸಿ ಮಾರ್ಗದರ್ಶಕರು

ಸಚಿವ ಸಿ. ಟಿ. ರವಿ ಹೇಳಿಕೆ l ಗೈಡ್‌ಗಳಿಗೆ  ಆಹಾರ ಕಿಟ್ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬೇಲೂರಿನಲ್ಲಿ ಪ್ರವಾಸಿ ಗೈಡ್ ಗಳಿಗೆ ಪಡಿತರ ಸಾಮಗ್ರಿಯನ್ನು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ವಿತರಿಸಿದರು.

ಕೊರೊನಾ ಸೋಂಕು ನಿಯಂತ್ರಣ ಕ್ರಮದ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ   ಜಾರಿಯಲ್ಲಿದೆ .   ಇದರಿಂದ ಪ್ರವಾಸಿ ಮಾರ್ಗದರ್ಶಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಊಟೋಪಚಾರಕ್ಕಾಗಿ ದಿನಸಿ ಸಾಮಗ್ರಿ ವಿತರಿಸಲಾಗಿದೆ ಎಂದು  ಸಚಿವರು ತಿಳಿಸಿದರು.

ಚಿಕ್ಕಮಗಳೂರು ಬೇಲೂರು ಹಾಸನ‌ ಹೊಳೆ ನರಸೀಪುರ ಬಿಳಿಕೆರೆ ನಾಲ್ಕು ಲೈನ್ ರಸ್ತೆ ಪ್ರಸ್ತಾಪ ಹಿಂದಿನಿಂದಲೂ ಇದೆ ಹಾಲಿ ಬೇಲೂರುವರೆಗೆ ರಾಷ್ಟ್ರೀಯ ಶುಂಠಿ ಹೆದ್ದಾರಿಗೆ ಸೇರಿದ್ದು, ಚಿಕ್ಕಮಗಳೂರು ಬೇಲೂರು ‌ನಡುವಿನ‌ ರಸ್ತೆ ತಾಂತ್ರಿಕ ಕಾರಣಗಳಿಂದ ಕೈಬಿಟ್ಟಿದ್ದು ಸದ್ಯದಲ್ಲೆ ಸೇರ್ಪಡೆಗೊಳ್ಳಲಿದೆ ಎಂದರು.

ಚಿಕ್ಕಮಗಳೂರು ‌ಬೇಲೂರು  ಹಾಸನ ರೈಲ್ವೆ ಯೋಜನೆಗೆ ಮಂಜೂರಾತಿ ದೊರೆತಿದೆ. ರಾಜ್ಯ ಸರ್ಕಾರ ಜಮೀನು ಒದಗಿಸಿದರೆ ತಕ್ಷಣ ಕೆಲಸ ಪ್ರಾರಂಭಿಸುವುದಾಗಿ ರೈಲ್ವೆ ಸಚಿವರು ತಮಗೆ ವೈಯಕ್ತಿಕವಾಗಿ ತಿಳಿಸಿದ್ದಾರೆ ಎಂದು ರವಿ ಹೇಳಿದರು.

ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ಸಾಂಪ್ರದಾಯಿಕ ವಾರ್ಷಿಕ ಪೂಜೆ‌ ನಡೆದಿದೆ. ಜಿಲ್ಲಾಧಿಕಾರಿಯವರ ಸೂಚನೆ ಹಾಗೂ ಕೇಂದ್ರ ಸರ್ಕಾರದ ಲಾಕ್ ಡೌನ್ ಆದೇಶ ಜಾರಿ ಗೊಳಿಸಿರುವುದರಿಂದ  ಬೇಲೂರಿನಲ್ಲಿ ರಥೋತ್ಸವ  ನಡೆದಿಲ್ಲ .ಕೊರೊನಾ ಸೋಂಕು ದೂರಾಗಿ‌ ಎಲ್ಲವೂ ಸುಸೂತ್ರವಾದ ನಂತರ ವಿಜ್ರಂಭಣೆಯ ರಥೋತ್ಸವ ನಡೆಸಬಹುದಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕರಾದ ಕೆ.ಎಂ ಲಿಂಗೇಶ್  ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ