NEWSಆರೋಗ್ಯ

ಸಂಡೂರು ತಾಲೂಕಿನಲ್ಲಿ ಮೂವರು ನಕಲಿ ವೈದ್ಯರ ವಶ

ಸಂಡೂರು ತಹಸೀಲ್ದಾರ್ ರಶ್ಮೀ ನೇತೃತ್ವ l ದಿಢೀರ್ ಕಾರ್ಯಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿದ ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಮೂರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಸೀಜ್ ಮಾಡಿದ್ದಾರೆ.

ಇವರ ಮೇಲೆ ಪ್ರಕರಣ ದಾಖಲಿಸುವಂತೆ ಕೂಡ್ಲಿಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ಕಾಳಿಂಗೇರಿಯಲ್ಲಿ ಅವಿಷೇಕ್ ಎನ್ನುವ ಆರ್.ಎಂ.ಪಿ ಡಾಕ್ಟರ್ ಪಶ್ಚಿಮ ಬಂಗಾಳದ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಕಾರ್ಡ್ ಇಟ್ಟುಕೊಂಡು ‌ಜನರಿಗೆ‌ ಚಿಕಿತ್ಸೆ ನೀಡುತ್ತಿದ್ದ,ಸ್ಟೀರಾಯ್ಡ್ ಬಳಸುತ್ತಿದ್ದ ಮತ್ತು ಓವರ್ ಡೋಸ್ ಕೋಡ್ತಾ ಇರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.

ಚೋರನೂರು ಹೋಬಳಿ ವ್ಯಾಪ್ತಿಯ ಅಂಕಮ್ಮನಾಳದಲ್ಲಿ ಇಬ್ಬರು ಇದೇ ರೀತಿ ಕ್ಲಿನಿಕ್ ಇಟ್ಟುಕೊಂಡು‌ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಇಟ್ಟುಕೊಂಡು ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಬಸವರಾಜ ಮತ್ತು ಜಾಫರ್ ಅಲಿ ಎನ್ನುವವರಲ್ಲಿ ಕರ್ನಾಟಕ ಮೆಡಿಕಲ್ ಅಸೋಸಿಯೇಶನ್ ಸಂಬಂಧಿಸಿದ ಯಾವುದೇ ಪ್ರಮಾಣಪತ್ರ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಲಭ್ಯವಿರಲಿಲ್ಲ. ಇವರು ಕೂಡ ಸ್ಟೀರಾಯ್ಡ್ ಬಳಸುತ್ತಿರುವುದು ಮತ್ತು ಓವರ್ ಡೋಸ್ ಕೋಡ್ತಾ ಇರುವುದು ಕಂಡುಬಂದಿದೆ ಎಂದರು.

ಈ ಕಾರ್ಯಾಚರಣೆ ಸಂದರ್ಭದಲ್ಲಿ ಕೂಡ್ಲಿಗಿ ಪೊಲೀಸರ ವಶಕ್ಕೆ ಇವರನ್ನು ನೀಡುವ ಸಂದರ್ಭದಲ್ಲಿ ಜಾಫರ್ ಅಲಿ ಎನ್ನುವವರು ತಪ್ಪಿಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ‌ಜಾಲ‌ ಬಿಸಿದ್ದಾರೆ. ಉಳಿದ ಇಬ್ಬರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ‌ ಡಾ.ಗೋಪಾಲಕೃಷ್ಣ,ಡಾ.ಕಿರಣ ಹಾಗೂ ಕಂದಾಯ ಇಲಾಖೆಯ ಆರ್ ಐಗಳು ಮತ್ತು ವಿಎಗಳು ಇದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...