NEWSನಮ್ಮರಾಜ್ಯರಾಜಕೀಯ

ಸಿಎಂ ಕೊಟ್ಟ ಜವಾಬ್ದಾರಿ ಮರೆತ ಸಚಿವರಿಂದ ವಿಜಯೋತ್ಸವ: ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ನಿಯಂತ್ಣ ದೃಷ್ಟಿಯಲ್ಲಿಕೊಂಡು ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿದರೆ ಬೇಜವಾಬ್ದಾರಿ ಸಚಿವರು ವಿಜಯೋಯತ್ಸವ ಆಚರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಅಷ್ಟೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಎಚ್ಚರಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು