NEWSಆರೋಗ್ಯನಮ್ಮರಾಜ್ಯ

ಸಿಎಂ ಫೋನ್‌ ಕರೆಗೆ ಸ್ಪಂದಿಸಿ ಮಹಿಳೆಗೆ ಕ್ಯಾನ್ಸರ್ ಚಿಕಿತ್ಸೆ

ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಕುಡಚಿ ಮಹಿಳೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್ 19 ರ ಲಾಕ್ ಡೌನ್ ಹಿನ್ನೆಲೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ಬೆಳಗಾವಿ ಜಿಲ್ಲೆ ಕುಡಚಿಯ 50 ವರ್ಷದ ಮಹಿಳೆಯೊಬ್ಬರ ನೋವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಂದಿಸಿದ್ದಾರೆ.

ಕುಡಚಿಯ ಮಹಿಳೆಯ ತೊಂದರೆ ಗಮನಕ್ಕೆ ಬಂದ ತಕ್ಷಣ ಭಾನುವಾರ ರಾತ್ರಿ 8 ಗಂಟೆಯ ಹೊತ್ತಿಗೆ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು , ಮಹಿಳೆಯ ಚಿಕಿತ್ಸೆಗೆ ಏರ್ಪಾಡು ಮಾಡಲು ಸೂಚಿಸಿದರು.

ತಕ್ಷಣ ಕಾರ್ಯಪ್ರವೃತ್ತರಾದ ಡಿ ಎಚ್ ಓ ಹುಬ್ಬಳ್ಳಿ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಸಂಶೋಧನಾ ಕೇಂದ್ರದ ಆಡಳಿತ ಮಂಡಳಿ ಸಂಪರ್ಕಿಸಿ ಇಂದು( ಏ.13) ಚಿಕಿತ್ಸೆಗೆ ಸಮಯ ನಿಗದಿಪಡಿಸಿಕೊಟ್ಟಿದ್ದಾರೆ.

ಕೊರೊನಾ ನಿಯಂತ್ರಣದ ಕಾರ್ಯದೊತ್ತಡದ ನಡುವೆಯೂ ಸ್ಪಂದಿಸಿರುವ ಮುಖ್ಯಮಂತ್ರಿಗಳ ನಡೆ ಮಾನವೀಯತೆಗೆ ದ್ಯೋತಕವಾಗಿದೆ. ಇದು ಸಿಎಂ ಯಡಿಯೂರಪ್ಪ ಅವರ ಜನಪರಕಾಳಜಿಯನ್ನು ತೋರುತ್ತದೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ