NEWSಕೃಷಿನಮ್ಮರಾಜ್ಯ

ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹೆಸರು

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್​ (Karnataka Waqf Board) ಆಸ್ತಿ ವಿಚಾರವಾಗಿ ಚರ್ಚೆ ಜೋರಾಗಿದೆ. ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರದಲ್ಲೇ 19 ಗುಂಟೆ ಸ್ಮಶಾನ- ಕಪನಯ್ಯನ ತೋಪು ಜಮೀನಿನ ಪಹಣಿಯಲ್ಲಿ ವಕ್ಫ್‌ ಬೋರ್ಡ್​ ಹೆಸರು ಸೇರ್ಪಡೆಯಾಗಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

19 ಗುಂಟೆ ಜಮೀನು ಈಗ ವಕ್ಫ್‌​ ಆಸ್ತಿಯಾಗಿದೆ. ಇದು 2021-22ನೇ ಸಾಲಿನಿಂದ ವಕ್ಫ್‌ ಬೋರ್ಡ್​ ಹೆಸರು ಆರ್‌ಟಿಸಿಯಲ್ಲಿ ಬಂದಿದೆ. ಇದಕ್ಕೂ ಹಿಂದೆ ಕಪನಯ್ಯನ ತೋಪು ಎಂದೇ ಇದೆ. ನೋಡಿ ಸಿಎಂ ಸ್ವಕ್ಷೇತ್ರದಲ್ಲೇ ಹಾಗೂ ಸಮಾಜ ಕಲ್ಯಾಣ ಸಚಿವರ ತಾಲೂಕಿನಲ್ಲೇ ಈ ರೀತಿ ಅಕ್ರಮ ನಡೆಯುತ್ತಿದೆ.

ಸದ್ಯ ಈ ಸ್ಮಶಾನ ಭೂಮಿಯಲ್ಲಿ ಪ್ರಸ್ತುತ ಬಡ ರೈತರೊಬ್ಬರು ವ್ಯವಸಾಯ ಮಾಡಿಕೊಂಡು ಬರುತ್ತಿದ್ದಾರೆ. ಕಾರಣ ರಂಗಸಮುದ್ರ ಗ್ರಾಮಸ್ಥರು ಗ್ರಾಮಕ್ಕೆ ಸಮೀಪದಲ್ಲೇ ಸ್ಮಶಾನ ಮಾಡಿಕೊಂಡಿರುವುದರಿಂದ ಈಗ ಅಲ್ಲಿ ಯಾವುದೇ ಅಂತ್ಯಕ್ರಿಯೆ ಮಾಡುತ್ತಿಲ್ಲ. ಹೀಗಾಗಿ ಗ್ರಾಮಸ್ಥರೆ ಆ ಬಡ ರೈತನಿಗೆ ಸ್ಮಶಾನವನ್ನು ಬಿಟ್ಟುಕೊಟ್ಟಿದ್ದಾರೆ.

ಇನ್ನು ದಶಕಗಳ ಹಿಂದಕ್ಕೆ ಹೋದರೆ ಕಪನಯ್ಯ ಎಂಬುವರು ಸ್ಮಶಾನಕ್ಕೆ ಈ ಭೂಮಿಯನ್ನು ದಾನವಾಗಿ ನಿಡ್ಡಿದ್ದರು ಎಂದು ಗ್ರಾಮದ ಸುರೇಶ್‌ ಎಂಬುವರು ವಿಜಯಪಥಕ್ಕೆ ಮಾಹಿತಿ ನೀಡಿದರು. ಆದರೆ, ಇದು ಈಗ ಕಪನಯ್ಯನ ತೋಪು ವಕ್ಫ್‌ ಬೋರ್ಡ್​ ಆಗಿರುವುದು ಭಾರಿ ಅಚ್ಚರಿಯಾಗುತ್ತಿದೆ ಎಂದು ಹೇಳಿದ್ದಾರೆ.

2021-22ರ ನಂತರ ಏಕಾಏಕಿ ವಕ್ಫ ಬೋರ್ಡ್ ಹೆಸರಿಗೆ ಬದಲಾಗಿದೆ. ಯಾವುದೇ ನೋಟೀಸ್ ನೀಡದೆ ಜಮೀನನ್ನು ಮೋಸದಿಂದ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಹೀಗಾಗಿ ನ್ಯಾಯಬೇಕು ಅಂತ ಗ್ರಾಮಸ್ಥರು ಹೋರಾಟ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ಸಾಕಷ್ಟ ಜಮೀನು ವಕ್ಫ ಬೋರ್ಡ್ ಹೆಸರಿಗೆ ಆಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಈ ರೀತಿ ಆಗುತ್ತಿದೆ. ಹೀಗಾಗಿ ಕೂಡಲೆ ಸರ್ಕಾರ ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ವಕ್ಫ ಬೋರ್ಡ್​ನ ರಾದಂತ ಬಯಲಾಗುತ್ತಿದೆ. ರೈತರು ತಮ್ಮ ಜಮೀನು ದಶಮಾನಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಈಗ ವಕ್ಫ ಬೋರ್ಡ್ ಪಹಣಿಯಲ್ಲಿ ತನ್ನ ಹೆಸರು ಸೇರುತ್ತಿರುವುದರಿಂದ ರೈತರಿಗೆ ಆತಂಕ ಎದುರಾಗಿದೆ. ಹೀಗಾಗಿ ಕೂಡಲೆ ಸರ್ಕಾರ ಆಗಿರುವ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಬೇಕು ಎಂದು ದೇವರಾಜು ಒತ್ತಾಯಿಸಿದ್ದಾರೆ.

 

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!