NEWSನಮ್ಮಜಿಲ್ಲೆನಮ್ಮರಾಜ್ಯ

ಸಂಕಷ್ಟಕ್ಕೆ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮೀ  ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್‌ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ. ಹೀಗಾಗಿ ತಕ್ಷಣ ಫಲಾನುಭವಿಗಳಿಗೆ ಬರಬೇಕಿರುವ ಬಾಕಿ ಕಂತಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲು ಖಜಾನೆಯಲ್ಲಿ ಹಣವಿಲ್ಲದಿರುವುದರಿಂದ ತಾಂತ್ರಿಕ ಕಾರಣಗಳನ್ನು ಕೊಟ್ಟುಕೊಂಡು ದಿನದೂಡಲಾಗುತ್ತಿದೆ ಎಂಬ ಅನುಮಾನ ಜನಸಾಮಾನ್ಯರಲ್ಲಿ ಮೂಡುವಂತಾಗಿದೆ. ಇಂತಹ ಆರೋಪಗಳಿಗೆ ಎಡೆಮಾಡಿಕೊಡದೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆದಾಯ ತೆರಿಗೆ ಇಲಾಖೆ ಹಾಗೂ ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ತುರ್ತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ಕೊಡಬೇಕು. ಫಲಾನುಭವಿಗಳ ಪೈಕಿ ಕೆಲವರು ಪತಿ ಮತ್ತು ಮಕ್ಕಳ ದೆಸೆಯಿಂದ ಮನೆ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. ಹಾಗಾಗಿ ನಿಜವಾದ ಜಿಎಸ್‌ಟಿದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಸಮಸ್ಯೆ ಬಗೆಹರಿಸಬೇಕು ಎಂದು ಚಂದ್ರು ಎಂದು ಒತ್ತಾಯಿಸಿದ್ದಾರೆ.

ಯೋಜನೆಗೆ ಅರ್ಹರಿದ್ದರೂ, ಅನರ್ಹತೆ ಪಟ್ಟಿಯಲ್ಲಿ ಇರುವವರ ಸಂಖ್ಯೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲೇ ಅಧಿಕವಾಗಿದೆ. ಅವುಗಳು ರಾಜ್ಯದಲ್ಲಿ ಅತಿಹೆಚ್ಚು ಬಡವರಿರುವ ಜಿಲ್ಲೆಗಳಾಗಿವೆ. ಆಸ್ಪತ್ರೆ ಖರ್ಚಿಗೆ, ದೈನಂದಿನ ಸಾಂಸಾರಿಕ ಖರ್ಚಿಗೆ, ಮಕ್ಕಳ ಕಲಿಕಾ ಸಾಮಗ್ರಿ-ಬಟ್ಟೆಬರೆಗಳ ಖರ್ಚಿಗೆ ಗೃಹಲಕ್ಷ್ಮೀ ಹಣದ ಮೇಲೆ ಅವಲಂಬಿತರಾಗಿದ್ದಾರೆ.

ಇಂತಹ ಲಕ್ಷಾಂತರ ಮಹಿಳೆಯರಿಗೆ ನಷ್ಟವಾಗಬಾರದು. ಆರ್ಥಿಕವಾಗಿ ಸಮಾಧಾನಕರ ಬದುಕು ಕಟ್ಟಿಕೊಳ್ಳುವಂತಾಗಬೇಕು. ರಾಜ್ಯ ಸರ್ಕಾರ ತಕ್ಷಣ ದೋಷಗಳನ್ನು ಸರಿಪಡಿಸಿ ಹಣವನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ವಿಶ್ವಾಸವಿಟ್ಟು 136 ಸೀಟುಗಳನ್ನು ಕರುಣಿಸಿದ್ದಾರೆ. ಅಂತಹ ತಾಯಂದಿರಿಗೆ ಅನ್ಯಾಯ ಮಾಡುವುದು ಉಚಿತವಲ್ಲ. ಅವರ ಶಾಪಕ್ಕೆ ಒಳಗಾಗದೆ ತಪ್ಪನ್ನು ಸರಿಪಡಿಸಿಕೊಳ್ಳಬೇಕು. ತಡಮಾಡದೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಾಕಿ ಹಣ ಪಾವತಿಸಬೇಕು. ಇಲ್ಲದಿದ್ದರೆ ರಾಜ್ಯದ ಮಹಿಳೆಯರನ್ನು ಒಟ್ಟುಗೂಡಿಸಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪತ್ರದ ಮುಖೇನ ರವಾನಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ