NEWSಕೃಷಿನಮ್ಮರಾಜ್ಯ

ಸಂಘಟಿತ ಹೋರಾಟ ನಡೆಸದಿದ್ದರೆ ರೈತ ಕುಲವೇ ನಾಶ: ಕುರುಬೂರು ಶಾಂತಕುಮಾರ್ ಆತಂಕ

ವಿಜಯಪಥ ಸಮಗ್ರ ಸುದ್ದಿ

ಕೂಡಲಸಂಗಮ: ರೈತರ ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಾರೆ. ಆದರೆ ಅನ್ನದಾತರನ್ನು ಕಡೆಗಣಿಸಿ ರೈತರ ಮೂಗಿಗೆ ತುಪ್ಪ ಸವರುತ್ತಾರೆ ಈ ರೀತಿಯ ಶೋಷಣೆಗಳಿಂದಲೇ ರೈತರ ಆತ್ಮಹತ್ಯೆಗಳಾಗುತ್ತಿವೆ ಎಂದು ರೈತರತ್ನ ಕುರುಬೂರು ಶಾಂತಕುಮಾರ್ ಸರ್ಕಾರಗಳ ವಿರುದ್ಧ ಕಿಡಿಕಾರಿದರು.

ಕೂಡಲಸಂಗಮದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ ಜಾಗೃತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ರೈತರ ಶೋಷಣೆ ನಿಂತಿಲ್ಲ. ಒಂದು ವರ್ಷಕಾಲ ಹೋರಾಟ ಮಾಡಿದರು ರೈತರಿಗೆ ಎಂಎಸ್ಪಿ ಗ್ಯಾರಂಟಿ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಸಾಲ ಮಾಡಿ ವಿದೇಶಕ್ಕೆ ಹಾರಿ ಹೋಗುವ ಬಂಡವಾಳ ಶಾಹಿಗಳಿಗೆ ಸಾವಿರಾರು ಕೋಟಿ ರೂ.ಗಳ ಸುಲಭ ಸಾಲ ಸಿಗುತ್ತದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ರೈತರ ಜಮೀನಿಗೆ ಒಂದು ಲಕ್ಷ ಸಾಲ ನೀಡಲು ಸತಾಯಿಸುತ್ತಾರೆ. ಇದು ರೈತರ ದೌರ್ಭಾಗ್ಯ. ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ರಿಯಲ್ ಎಸ್ಟೇಟ್ ಉದ್ಯಮಿಗಳ ಪಾಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಸೇವಕರಾಗುತ್ತಿದ್ದಾರೆ. ಅದಕ್ಕಾಗಿ ಸಂಘಟಿತ ಹೋರಾಟದ ಅನಿವಾರ್ಯತೆ ಇದೆ. ಕೆಲವು ರೈತ ಸಂಘಟನೆಗಳು ರಾಜಕೀಯ ಪಕ್ಷಗಳ ಮುಖವಾಡಗಳಾಗಿವೆ, ಇದು ಕೂಡ ರೈತರ ದುರ್ಬಲತೆಗೆ ಕಾರಣವಾಗುತ್ತದೆ. ರಾಜಕೀಯ ಪಕ್ಷಗಳು ಇಂಥವರನ್ನು ಬಳಸಿ ರೈತರ ಶೋಷಣೆ ಮಾಡುತ್ತಿದ್ದಾರೆ ಇಂತಹ ಇಬ್ಬಂದಿಗಳ ನೀತಿ ವಿರುದ್ಧ ಹೋರಾಡಲು ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಾಗಾರ ಉದ್ಘಾಟನೆ ಮಾಡಿದ ಬೆಳಗಾವಿಯ ಸಾವಯುವ ಕೃಷಿಕ ಸುರೇಶ್ ಬಿ.ದೇಸಾಯಿ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ರೈತರಿಗೆ ಸ್ವಾಭಿಮಾನಿ ಸ್ವಾವಲಂಬಿ ಬದುಕು ಕಲಿಸುವ ಕಾರ್ಯಾಗಾರ ಉದ್ಘಾಟನೆ ಮಾಡುತ್ತಿರುವುದು ರೈತನಾಗಿ ನನಗೆ ಸಂತೋಷದ ಸಂಗತಿಯಾಗಿದೆ ಎಂದರು.

ರಾಜ್ಯ ರೈತ ಸಂಘ ರಾಜ್ಯ ಸಂಚಾಲಕ ಪ್ರಸನ್ನಕುಮಾರ್, ರಾಜ್ಯ ಕಬ್ಬು ಬೆಳೆಗಾರ ಸಂಘದ ಕಾರ್ಯಧ್ಯಕ್ಷ ವೀರನಗೌಡ ಪಾಟೀಲ್ ಮಾತನಾಡಿದರು. ಶಿವಲೀಲಾ ಸ್ವಾಗತ ಮಾಡಿದರು. ಪರಶುರಾಮ್ ಎತ್ತಿನ ಗುಡ್ಡ ಕಾರ್ಯಕ್ರಮ ನಿರ್ವಹಿಸಿದರು. 150ಕ್ಕೂ ಹೆಚ್ಚು ರಾಜ ಜಿಲ್ಲಾ ತಾಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು