NEWSನಮ್ಮರಾಜ್ಯರಾಜಕೀಯ

ಸಚಿವ ಡಿ.ಸುಧಾಕರ್‌ ವಜಾಗೆ ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವ ಡಿ.ಸುಧಾಕರ್‌ ಅವರ ಗೂಂಡಾವರ್ತನೆ ಅಕ್ಷಮ್ಯ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್‌ ಅವರು ತಮ್ಮ ವಿರುದ್ಧ ಭೂಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆಯ ದೂರು ದಾಖಲಿಸಿದವರಿಗೆ ಬೆದರಿಕೆ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಬುಧವಾರ ಪ್ರತಿಕ್ರಿಯಿಸಿದರು.

ಸಚಿವರೊಬ್ಬರು ಭೂಗತ ಪಾತಕಿಗಳ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಯಲಹಂಕ ನನಗೆ ಹೊಸದಲ್ಲ. ಕರ್ನಾಟಕ, ಆಂಧ್ರಪ್ರದೇಶದಲ್ಲಿ ಮಚ್ಚು, ಕೊಡ್ಲಿ ಇಟ್ಟುಕೊಂಡು ಓಡಾಟ ನಡೆಸಿದ್ದೇವೆ ಎಂದಿದ್ದಾರೆ. ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಿದ್ದಕ್ಕೆ ಸಂಬಂಧಿಸಿ ತಕ್ಷಣ ಡಿ. ಸುಧಾಕರ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸದರು.

ಸಿಎಂ ಸಿದ್ದರಾಮಯ್ಯ ಅವರು ದಲಿತ ಪರ ಸರ್ಕಾರ ಎಂದು ಹೇಳುತ್ತಲೇ ಬಂದಿದ್ದಾರೆ. ಈಗ ತಮ್ಮ ಸಂಪುಟದ ಸದಸ್ಯರೇ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ. ತಕ್ಷಣ ಅವರನ್ನು ಸಂಪುಟದಿಂದ ವಜಾಗೊಳಿಸುವ ಮೂಲಕ ತಮ್ಮ “ನುಡಿದಂತೆ ನಡೆಯುವ ಸಿದ್ದರಾಮಯ್ಯ” ಎಂಬ ಮಾತನ್ನು ಉಳಿಸಿಕೊಳ್ಳಬೇಕು ಎಂದು ಮು.ಚಂದ್ರು ಒತ್ತಾಯಿಸಿದರು.

ವೈರಲ್‌ ಆಗಿರುವ ವಿಡಿಯೋ 10 ವರ್ಷಗಳ ಹಿಂದಿನ ಪ್ರಕರಣವೆಂದು ಆರೋಪಿ ಡಿ.ಸುಧಾಕರ್‌ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸುಧಾಕರ್‌ ಅವರು ಖರೀದಿಸಿದ್ದ ಖಾಸಗಿ ಜಮೀನಿಗೆ ಬೇರೆಯವರು ನಿರ್ಮಿಸಿದ್ದ ಕಾಂಪೌಂಡ್‌ ತೆರವುಗೊಳಿಸಿ ಜಮೀನು ಸ್ವಾಧೀನಕ್ಕೆ ಪಡೆಯಲು ಮುಂದಾದ ಸಂದರ್ಭ ನಡೆದಿರುವ ಪ್ರಕರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದಾರೆ.

ಈ ಇಬ್ಬರ ಹೇಳಿಕೆ ಗೊಂದಲವಾಗಿದೆ. ತನಿಖೆಯ ವಿವರ ಸಿಗುವ ಮೊದಲೇ ಡಿ.ಕೆ.ಶಿವಕುಮಾರ್‌ ಅವರು ಆರೋಪಿಯ ರಕ್ಷಣೆಗೆ ನಿಂತಿರುವುದು ಪ್ರಶ್ನಾರ್ಹ ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು