NEWSನಮ್ಮಜಿಲ್ಲೆನಮ್ಮರಾಜ್ಯ

ಸಚಿವ ಮಹದೇವಪ್ಪ ಕೂಡಲೆ ಕ್ಷಮೆ ಯಾಚಿಸಬೇಕು: ಎಎಪಿಯ ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಮ್ಮ ಗನ್ ಮ್ಯಾನ್‌ನಿಂದ ಶೂ ಹಾಕಿಸಿಕೊಳ್ಳುತ್ತಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಈ ಕೂಡಲೇ ರಾಜ್ಯದ ಜನತೆಯ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿಕೊಂಡು ಬಂದ ಸಾಮಾಜಿಕ ನ್ಯಾಯ, ಸಮಾನತೆಯ ತತ್ವಗಳಿಗೆ ಸಂಪೂರ್ಣ ಎಳ್ಳು ನೀರು ಬಿಟ್ಟು ಅಧಿಕಾರದ ಮದದಿಂದ ಈ ರೀತಿಯ ವರ್ತನೆಗಳನ್ನು ಮಾಡುವುದನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಶೋಷಣೆಗೆ ಒಳಗಾಗಿರುವ ಸಮುದಾಯಗಳು ನಿಮ್ಮಿಂದ ಎಷ್ಟರಮಟ್ಟಿಗೆ ನ್ಯಾಯ ಪಡೆದುಕೊಳ್ಳುತ್ತವೆ ಎಂಬ ಪ್ರಶ್ನೆ ನಿಮ್ಮ ವರ್ತನೆಯನ್ನು ಮೂಡಿ ಬಂದಿದೆ. ನಿಮ್ಮಂತಹ ಬಲಿತ, ದೂರ್ತ ರಾಜಕಾರಣಿಗಳು ಈಗಾಗಲೇ ರಾಜಕಾರಣದಿಂದ ಹೆಸರಿಲ್ಲದೆ ಅಳಿಸಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ನೀವು ಕೂಡ ಮುಂಬರುವ ದಿವಸಗಳಲ್ಲಿ ಇದೇ ಸಾಲಿನಲ್ಲಿ ಅಳಿಸಿ ಹೋಗುವ ಮೊದಲು ನಿಮ್ಮ ಈ ಕೃತ್ಯಕ್ಕೆ ಬಳಸಿಕೊಂಡ ಆ ಪೊಲೀಸ್ ಗನ್ ಮ್ಯಾನ್ ಮುಂದೆ ಹಾಗೂ ರಾಜ್ಯದ ಜನತೆಯ ಮುಂದೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿ ತಮ್ಮ ತಪ್ಪನ್ನು ಒಪ್ಪಿಕೊಳ್ಳಿ ಎಂದು ಮೋಹನ್ ದಾಸರಿ ಆಗ್ರಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ