NEWSನಮ್ಮರಾಜ್ಯರಾಜಕೀಯ

ಸಿ.ಟಿ.ರವಿ ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ತಲೆಮರೆಸಿಕೊಂಡಿದ್ದ ಒಬ್ಬ ಕೊಲೆಗಡುಕ: ಲಕ್ಷ್ಮಣ್‌ ಆರೋಪ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಿ.ಟಿ.ರವಿ ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ಮದ್ರಾಸ್‌ನಲ್ಲಿ ತಲೆಮರೆಸಿಕೊಂಡಿದ್ದ ಒಬ್ಬ ಕೊಲೆಗಡುಕ. ಇಂತಹವರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಮೋಸ ಮಾಡುತ್ತಿದೆ. ಬಿಜೆಪಿ ನಾಯಕ ಸಿ.ಟಿ.ರವಿಗೆ ನಾಚಿಕೆಯಾಗಬೇಕು. ಮೇಕೆದಾಟು ವಿಚಾರದಲ್ಲಿ ಬಿಜೆಪಿಯವರದ್ದು ದ್ವಂದ್ವ ನಿಲುವು. ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ತಮಿಳುನಾಡಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈಶ್ವರಪ್ಪ ಬಿಜೆಪಿ ಮೇಲಿರುವ ಕೋಪವನ್ನು ಕಾಂಗ್ರೆಸ್ ಮೇಲೆ ತೋರಿಸುತ್ತಿದ್ದಾರೆ. ಇವರಿಗೇನಾದರೂ ಸಂಸ್ಕೃತಿ, ಕಾಮನ್ಸೆಸ್ಸ್ ಇದೆಯಾ? ಈಶ್ವರಪ್ಪನವರಿಗೆ ಮಾನ ಮರ್ಯಾದೆ ಇದೆಯಾ ಎಂಬುದನ್ನು ಮೊದಲು ತಿಳಿಸಿ.

ನಿಮ್ಮ ಮಗ ಕಾಂತೇಶ್ ಬೆಂಗಳೂರಿನ ಪೀಣ್ಯದಲ್ಲಿ ಸೈಟ್ ಖರೀದಿಸಿದ್ದಾರೆ. 4 ಇಂಡಸ್ಟ್ರಿಯಲ್ ಸೈಟು ಖರೀದಿಸಿದ್ದೀರಿ, ಅದರಲ್ಲಿ ಏನು ಮಾಡ್ತಿದ್ದೀರಿ? ಒಬ್ಬರಿಗೆ ನಾಲ್ಕು ಸೈಟ್ ಹೇಗೆ ನೀಡ್ತಾರೆ? ಇದರ ಒಟ್ಟು ಬೆಲೆ ಎಷ್ಟು? ಇಡಿ, ಐಟಿ ಯಾಕೆ ಇವರ ಬಗ್ಗೆ ತನಿಖೆ ಮಾಡುತ್ತಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರಾ ರೈಡ್ ಮಾಡೋದಾ ಎಂದು ಪ್ರಶ್ನಿಸಿದರು.

ಈಶ್ವರಪ್ಪ ಸರ್ಕಾರದ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಿಮ್ಮ ಮಗ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ನನ್ನ ಬಳಿ ಸಂಪೂರ್ಣ ದಾಖಲಾತಿ ಇದೆ. ಹೀಗಾಗಿ ಈ ಬಗ್ಗೆ ಇಡಿ ಹಾಗೂ ಐಟಿಗೆ ದೂರು ನೀಡುತ್ತಿದ್ದೇವೆ. ಯಾವ ರೀತಿ ತನಿಖೆ ಮಾಡುತ್ತಾರೋ ನೋಡುತ್ತೇವೆ. ಈಶ್ವರಪ್ಪ ಮೊದಲು ಹುಚ್ಚರ ರೀತಿ ಮಾತನಾಡುವುದನ್ನು ಬಿಡಲಿ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು