NEWSಆರೋಗ್ಯ

ಸಂಡೂರು ತಾಲೂಕಿನಲ್ಲಿ ಮೂವರು ನಕಲಿ ವೈದ್ಯರ ವಶ

ಸಂಡೂರು ತಹಸೀಲ್ದಾರ್ ರಶ್ಮೀ ನೇತೃತ್ವ l ದಿಢೀರ್ ಕಾರ್ಯಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿದ ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಮೂರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಸೀಜ್ ಮಾಡಿದ್ದಾರೆ.

ಇವರ ಮೇಲೆ ಪ್ರಕರಣ ದಾಖಲಿಸುವಂತೆ ಕೂಡ್ಲಿಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ಕಾಳಿಂಗೇರಿಯಲ್ಲಿ ಅವಿಷೇಕ್ ಎನ್ನುವ ಆರ್.ಎಂ.ಪಿ ಡಾಕ್ಟರ್ ಪಶ್ಚಿಮ ಬಂಗಾಳದ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಕಾರ್ಡ್ ಇಟ್ಟುಕೊಂಡು ‌ಜನರಿಗೆ‌ ಚಿಕಿತ್ಸೆ ನೀಡುತ್ತಿದ್ದ,ಸ್ಟೀರಾಯ್ಡ್ ಬಳಸುತ್ತಿದ್ದ ಮತ್ತು ಓವರ್ ಡೋಸ್ ಕೋಡ್ತಾ ಇರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.

ಚೋರನೂರು ಹೋಬಳಿ ವ್ಯಾಪ್ತಿಯ ಅಂಕಮ್ಮನಾಳದಲ್ಲಿ ಇಬ್ಬರು ಇದೇ ರೀತಿ ಕ್ಲಿನಿಕ್ ಇಟ್ಟುಕೊಂಡು‌ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಇಟ್ಟುಕೊಂಡು ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಬಸವರಾಜ ಮತ್ತು ಜಾಫರ್ ಅಲಿ ಎನ್ನುವವರಲ್ಲಿ ಕರ್ನಾಟಕ ಮೆಡಿಕಲ್ ಅಸೋಸಿಯೇಶನ್ ಸಂಬಂಧಿಸಿದ ಯಾವುದೇ ಪ್ರಮಾಣಪತ್ರ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಲಭ್ಯವಿರಲಿಲ್ಲ. ಇವರು ಕೂಡ ಸ್ಟೀರಾಯ್ಡ್ ಬಳಸುತ್ತಿರುವುದು ಮತ್ತು ಓವರ್ ಡೋಸ್ ಕೋಡ್ತಾ ಇರುವುದು ಕಂಡುಬಂದಿದೆ ಎಂದರು.

ಈ ಕಾರ್ಯಾಚರಣೆ ಸಂದರ್ಭದಲ್ಲಿ ಕೂಡ್ಲಿಗಿ ಪೊಲೀಸರ ವಶಕ್ಕೆ ಇವರನ್ನು ನೀಡುವ ಸಂದರ್ಭದಲ್ಲಿ ಜಾಫರ್ ಅಲಿ ಎನ್ನುವವರು ತಪ್ಪಿಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ‌ಜಾಲ‌ ಬಿಸಿದ್ದಾರೆ. ಉಳಿದ ಇಬ್ಬರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ‌ ಡಾ.ಗೋಪಾಲಕೃಷ್ಣ,ಡಾ.ಕಿರಣ ಹಾಗೂ ಕಂದಾಯ ಇಲಾಖೆಯ ಆರ್ ಐಗಳು ಮತ್ತು ವಿಎಗಳು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ