CrimeNEWSನಮ್ಮಜಿಲ್ಲೆ

ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ

ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ: ಕೇವಲ ಸೌತೆಕಾಯಿಗಾಗಿ ಅಣ್ಣನೊಬ್ಬ ತನ್ನ ತಂಗಿಯ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲದಲ್ಲಿ ನಡೆದಿದೆ.

ಐಮನ್ ಬಾನು ಹತ್ಯೆಯಾದ ಯುವತಿ. ಆಕೆಯನ್ನು ಹತ್ಯೆಗೈದ ಹಂತಕ ಸೋದರ ಫರ್ಮಾನ್ ಪಾಷಾ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಅಣ್ಣನ ಮಗನಿಗೆ ಕೊಲೆ ಆರೋಪಿ ಫರ್ಮಾನ್ ಪಾಷಾ ಸೌತೆಕಾಯಿ ತಿನಿಸುತ್ತಿದ್ದ. ಮಗನಿಗೆ ಜ್ವರ ಇದೆ ತಿನ್ನಿಸಬೇಡ ಎಂದು ಆತನ ಅತ್ತಿಗೆ ಹೇಳಿದ್ದಾಳೆ. ಇದೆ ವಿಚಾರವಾಗಿ ಅಣ್ಣ ಫರ್ಮಾನ್ ಪಾಷಾಗೆ ತಂಗಿ ಐಮನ್ ಬಾನು ಬೈದಿದ್ದಾಳೆ. ಇದರಿಂದ ಕೋಪಗೊಂಡ ಆತ ಕತ್ತಿ ತೆಗೆದುಕೊಂಡು ತಂಗಿಯ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ.

ಇನ್ನು ಬಿಡಿಸಲು ಬಂದ ಅತ್ತಿಗೆ ಹಾಗೂ ತಂದೆಯ ಮೇಲು ಕೂಡ ಆತ ಹಲ್ಲೆ ನಡೆಸಿದ್ದಾನೆ. ಸದ್ಯ ಇಬ್ಬರೂ ಗಾಯಾಳುಗಳನ್ನು ಚಾಮರಾಜನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ