NEWSನಮ್ಮಜಿಲ್ಲೆನಮ್ಮರಾಜ್ಯ

ಸತ್ತವರು, ಬದುಕಿರುವ ಸಾರಿಗೆ ಸಿಬ್ಬಂದಿಗಳ ಮಾಹಿತಿಯೇ ಸರ್ಕಾರದ ಬಳಿ ಇಲ್ಲ:  ಇದು ಬೇಜವಾಬ್ದಾರಿ ಎಂದು ಗುಡುಗಿದ ಎಎಪಿ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಕೋವಿಡ್‌ ಸೋಂಕು ತಗುಲಿರುವುದು ಹಾಗೂ ಅವರು ಮೃತಪಟ್ಟಿರುವುದರ ಬಗ್ಗೆ ಸಾರಿಗೆ ಇಲಾಖೆಯ ಬಳಿ ಮಾಹಿತಿಯೇ ಇಲ್ಲದಿರುವುದು ಸರ್ಕಾರದ ಬೇಜಾವಾಬ್ದಾರಿತನವನ್ನು ತೋರಿಸುತ್ತದೆ ಎಂದು ಎಎಪಿಯ ರಾಜ್ಯ ಯುವಘಟಕದ ಅಧ್ಯಕ್ಷರಾದ ಮುಕುಂದ್‌ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಕುಂದ್‌ ಗೌಡ, “ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಸರ್ಕಾರವು ಪ್ರಮುಖ ಬೇಡಿಕೆಯನ್ನೇ ಈಡೇರಿಸದಿದ್ದರೂ, ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕರ್ತವ್ಯಕ್ಕೆ ಮರಳಿದ್ದರು.

ಮೊದಲಿನಿಂದಲೂ ನೌಕರರನ್ನು ತಾತ್ಸಾರದಿಂದ ನೋಡುತ್ತಿದ ಸಾರಿಗೆ ಇಲಾಖೆಯು ಮುಷ್ಕರದ ನಂತರ ಅವರನ್ನು ಶತ್ರುಗಳಂತೆ ಕಾಣುತ್ತಿದೆ. ಕೋವಿಡ್‌ಗೆ ಬಲಿಯಾದ ನೌಕರರಿಗೆ ಪರಿಹಾರ ನೀಡುವುದು ಹಾಗಿರಲಿ, ಎಷ್ಟು ನೌಕರರಿಗೆ ಸೋಂಕು ತಗುಲಿದೆ ಎಂಬ ಅಂಕಿಅಂಶ ಕೂಡ ಸರ್ಕಾರದ ಬಳಿಯಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಾರಿಕೆ ನೌಕರರು ಕೋವಿಡ್‌ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿರುವುದು, ಮೃತಪಟ್ಟಿರುವುದು ಹಾಗೂ ಪರಿಹಾರ ವಿತರಣೆ ಮಾಹಿತಿ ತಿಳಿಯಲು ನಾವು ಆರ್‌ಟಿಐ ಅರ್ಜಿ ಸಲ್ಲಿಸಿದ್ದೆವು. ನಾವು ಕೇಳಿದ ಮೂರು ಪ್ರಶ್ನೆಗಳಿಗೂ ಇಲಾಖೆಯು ತಮ್ಮ ಬಳಿ ಮಾಹಿತಿ ಇಲ್ಲವೆಂದು ಉತ್ತರ ನೀಡಿದೆ.

ಅಧಿಕಾರಿಗಳ ಮಾಹಿತಿ ಹೊಂದಿರುವ ಸರ್ಕಾರವು ನೌಕರರನ್ನು ಮಾತ್ರ ಇಷ್ಟು ಕೇವಲವಾಗಿ ನೋಡುತ್ತಿರುವುದು ದುರಂತ. ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಇದು ಎತ್ತಿ ತೋರಿಸುತ್ತದೆ. ಕಷ್ಟುಪಟ್ಟು ದುಡಿಯುವ ಕಾರ್ಮಿಕರನ್ನು ಹೀನಾಯವಾಗಿ ಕಾಣುವುದು ಯಾರಿಗೂ ಶೋಭೆ ತರುವಂಥದ್ದಲ್ಲ. ಕಾರ್ಮಿಕರು ಚೆನ್ನಾಗಿದ್ದರೆ ಮಾತ್ರ ಸಮಾಜ ಚೆನ್ನಾಗಿರುತ್ತದೆ ಎಂಬುದನ್ನು ಸಾರಿಗೆ ಸಚಿವ ಲಕ್ಷಣ ಸವದಿ ಅರಿತುಕೊಳ್ಳಬೇಕು ಎಂದು ಮುಕುಂದ ಗೌಡ ತೀಕ್ಷ್ಣವಾಗಿಯೇ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಮಹಿಳಾ ಮುಖಂಡರಾದ ಉಷಾ ಮೋಹನ್‌ ಮಾತನಾಡಿ, “ಸಿಬ್ಬಂದಿಗಳೆಲ್ಲ ನನ್ನ ಕುಟುಂಬದ ಸದಸ್ಯರಿದ್ದಂತೆ ಎಂದು ಭಾಷಣ ಬಿಗಿಯುವ ಸಾರಿಗೆ ಸಚಿವರು ನೌಕತರ ಹಿತಕಾಪಾಡಲು ಏನು ಮಾಡಿದ್ದಾರೆ? ನೌಕರರಿಗೆ ಉಚಿತ ಸ್ಯಾನಿಟೈಜನರ್‌ ನೀಡಲೂ ಅವರಿಗೆ ಸಾಧ್ಯವಾಗಿಲ್ಲ. ಮಹಾಮಾರಿ ಕೋವಿಡ್‌ನಿಂದ ಇಲಾಖೆಯ ಸಿಬ್ಬಂದಿಯನ್ನು ರಕ್ಷಿಸಲು ಯಾವ ಕ್ರಮವನ್ನೂ ಅವರು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಾದರೂ ಎಚ್ಚೆತ್ತುಕೊಂಡು ಮೃತಪಟ್ಟ ಪ್ರತಿಯೊಬ್ಬ ನೌಕರರ ಕುಟುಂಬಕ್ಕೆ ಪರಿಹಾರ ವಿತರಿಸಬೇಕು. ಎಷ್ಟು ಸಿಬ್ಬಂದಿಗೆ ಸೋಂಕು ತಗುಲಿತ್ತು, ಎಷ್ಟು ಸಿಬ್ಬಂದಿ ಮೃತಪಟ್ಟಿದ್ದಾರೆ, ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂಬ ಅಂಶವನ್ನು ಶೀಘ್ರವೇ ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು