NEWSನಮ್ಮಜಿಲ್ಲೆಬೆಂಗಳೂರು

ಸ್ಥಳೀಯ ಪ್ರಭಾವಿ ಮುಖಂಡನ ಅನಗತ್ಯ ಹಸ್ತಕ್ಷೇಪ: ಗಬ್ಬುನಾರುತ್ತಿದೆ ಚರ್ಚ್ ಸ್ವೀಟ್‌ – ಮೋಹನ್‌ ದಾಸರಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಚರ್ಚ್ ಸ್ವೀಟ್‌ನಲ್ಲಿ ಒಳಚರಂಡಿ ನೀರು ರಸ್ತೆಗೆ ಹರಿದು ಗಬ್ಬುನಾರುತ್ತಿದ್ದರೂ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯು ಇತ್ತ ಸುಳಿಯದಿರುವುದು ಅವರ ಕರ್ತವ್ಯ ನಿಷ್ಠೆ ಏನೆಂಬುದನ್ನು ತೋರಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದ್ದಾರೆ.

ಬೆಂಗಳೂರಿನ ಅತ್ಯಂತ ಪ್ರಮುಖ ರಸ್ತೆ ಚರ್ಚ್ ಸ್ಟ್ರೀಟ್‌ನಲ್ಲಿ ಹಲವು ದಿನಗಳಿಂದ ಕಟ್ಟಡವೊಂದರ ಒಳಚರಂಡಿ ನೀರು ರಸ್ತೆಗೆ ಹರಿದು ಸಂಪೂರ್ಣ ಗಬ್ಬು ನಾರುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದು, ಈ ಸಂಬಂಧ ಮೋಹನ್ ದಾಸರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸರ್ಕಾರದ ಗಮನ ಸೆಳೆದರು.

ಕಳೆದ ಹಲವು ತಿಂಗಳುಗಳಿಂದ ಈ ಸಮಸ್ಯೆಯನ್ನು ಬಗೆಹರಿಸಲಾರದೆ ಸ್ಥಳೀಯ ಪ್ರಭಾವಿ ಮುಖಂಡರು ಅನಗತ್ಯ ಹಸ್ತಕ್ಷೇಪ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕಾದ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಅಕ್ರಮವಾಗಿ ಹುಕ್ಕ ಬಾರ್ ನಡೆಸುತ್ತಿರುವ ಈ ಕಟ್ಟಡದಿಂದ ಈ ರೀತಿ ಒಳಚರಂಡಿ ನೀರು ಹರಿದು ಬರುತ್ತಿದೆ. ಆದರೂ ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಸ್ಮಾರ್ಟ್ ಸಿಟಿ ಕಂಪನಿಯವರು ಸಂಬಂಧಿಸಿದಲ್ಲ ಎಂಬಂತೆ ಒಬ್ಬರಿಗೊಬ್ಬರು ಕೈಚಲ್ಲಿ ಕುಳಿತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಅಧಿಕಾರಿಗಳು ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸದಿದ್ದಲ್ಲಿ ತೀವ್ರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ. ಇದಕ್ಕೂ ಮುನ್ನ ಎಚ್ಚೆತ್ತುಕೊಂಡು ನಾಗರಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸಿ ಎಂದು ಮೋಹನ್ ದಾಸರಿ ಎಚ್ಚರಿಸಿದರು.

ಈ ವೇಳೆ ಸ್ಥಳೀಯ ಆಮ್‌ ಆದ್ಮಿ ಪಕ್ಷದ ಮುಖಂಡ ಅನಿಲ್ ನಾಚಪ್ಪ, ಮೋಹನ್ ಇನ್ನಿತರರು ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ