NEWSಸಿನಿಪಥ

ಸುಧಾಮೂರ್ತಿಗೆ ಟೆಲಿವಿಷನ್ ಅಸೋಸಿಯೇಷನ್ ಋಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆ ಬಿಟ್ಟು ಹೊರ ಹೋಗದಂತಹ ಪರಿಸ್ಥಿತಿ. ಇದರಿಂದ ನಿತ್ಯಜೀವನ ನಡೆಸೋದು ತುಂಬ ಕಷ್ಟದ ಸಮಯವಾಗಿದೆ. ಇನ್ನು  ಮೇ 3 ರ ತನಕ ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು ಅದು ನಾಡಿದ್ದು ಅಂತ್ಯ ಕಾಣಲಿದೆಯಾ ಎಂದು ಇನ್ನು ಕೂಡಾ ಸ್ಪಷ್ಟ ಆಗಿಲ್ಲ.

ಈ ನಡುವೆ ಶೂಟಿಂಗ್ ನಿಂತಿರುವ ಕಾರಣ ಕಿರುತೆರೆ ಕಲಾವಿದರು, ತಂತ್ರಜ್ಞರು ಕೆಲಸವಿಲ್ಲದೇ ಮನೆಯಲ್ಲಿಯೇ ಕುಳಿತಿದ್ದಾರೆ. ಇದರಿಂದ ಕಲಾವಿದರು ನಿತ್ಯ ಜೀವನ ಸಾಗಿಸಲು ತುಂಬ ತೊಂದರೆ ಪಡುತ್ತಿದ್ದಾರೆ. ಅದನ್ನು ಅರಿತ ದಾನಿಗಳು ನೆರವಿಗೆ ಬಂದಿದ್ದು ಸ್ವಲ್ಪಮಟ್ಟಿಗೆ ನೆರವಿನ ಹಸ್ತಚಾಚಿದ್ದಾರೆ.

ಒಂದೆರಡು ದಿನಗಳ ಕಾಲ ಕೆಲಸವಿಲ್ಲದೇ ಕೂರಬಹುದು, ಕಡೇ ಪಕ್ಷ ಒಂದು ವಾರ ಕಳೆಯಬಹುದು, ಆದರೆ ತಿಂಗಳುಗಟ್ಟಲೇ ಮನೆಯಲ್ಲಿ ಕೂತಿರುವುದರಿಂದ ಕೆಲಸವಿಲ್ಲದೇ ಹೊಟ್ಟೆ ತುಂಬಿಸಲು ಕೂಡಾ ಹಲವರಿಗೆ ಕಷ್ಟಸಾಧ್ಯ. ಇದೀಗ ಅಂಥ ಕಲಾವಿದರು, ತಂತ್ರಜ್ಞರ ಕಷ್ಟಕ್ಕೆ ನೆರವಾಗಿದ್ದಾರೆ ಲೇಖಕಿ, ಸಮಾಜಸೇವಕಿ ಸುಧಾ ಮೂರ್ತಿ ಅವರು.

ಸುಧಾ ಮೂರ್ತಿಯವರು ಕಷ್ಟದಲ್ಲಿರುವ ಕಿರುತೆರೆ ಕಲಾವಿದರು, ತಂತ್ರಜ್ಞರಿಗೆ ರೇಷನ್ ಕಿಟ್ ವಿತರಿಸುವ ಮೂಲಕ ಸಹಾಯ ಮಾಡಿದ್ದಾರೆ. ಬರೋಬ್ಬರಿ 3000 ಕಿಟ್ ವಿತರಿಸಿರುವ ಅವರು  ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡಿದ್ದಾರೆ. ಸುಧಾ ಮೂರ್ತಿಯವರ ಮಾಡಿರುವಂತಹ ಈ ಮಹಾತ್ಕಾರ್ಯಕ್ಕೆ ಟೆಲಿವಿಷನ್ ಅಸೋಸಿಯೇಷನ್ ಧನ್ಯವಾದ ಅರ್ಪಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ