NEWSನಮ್ಮರಾಜ್ಯರಾಜಕೀಯ

ಸಂಪುಟ ರಚನೆ ವೇಳೆ ಅಸಮಾಧಾನ ಸಹಜ: ಸಿಎಂ ಬಿಎಸ್‌ಬಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಯಾವುದೇ ಸರ್ಕಾರದಲ್ಲಿ ಸಂಪುಟ ರಚನೆ ಆದಾಗ ಕೆಲ ಶಾಸಕರು ಮತ್ತು ಖಾತೆ ಹಂಚಿಕೆ ವೇಳೆ ಅಸಮಾಧಾನವಾಗುವುದು ಸಹಜ. ಇನ್ನು ಸಂಪುಟದಲ್ಲೂ ಕೆಲವರು ಹಿರಿಯರು ಇದ್ದಾರೆ. ಏನೇ ಆದರು ಈ ವೇಳೆ ಅಸಮಾಧಾನ ಸ್ವಲ್ಪ ಇರುತ್ತದೆ ನಂತರ ಎಲ್ಲವೂ ರಿ ಹೋಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಅಕಾಲಿಕವಾಗಿ ಮೃತಪಟ್ಟ ಹಾವೇರಿ ಜಿಲ್ಲೆಯ ಶಿಗ್ಗಾಂವ ಸವಣೂರ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಸಂಪುಟ ರಚನೆ ಆದಾಗ ಅಸಮಾಧಾನ ಸಹಜವಾಗಿರುತ್ತದೆ. ನಾನು ಎಲ್ಲರನ್ನೂ ಕರೆದು ಮಾತನಾಡುತ್ತೇನೆ. ಆನಂದ್ ಸಿಂಗ್ ನನ್ನ ಹಳೆಯ ಸ್ನೇಹಿತ. ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಅವರು ಯಾವ ಖಾತೆ ಕೇಳಿದ್ದರು ಎನ್ನುವುದು ಬಹಿರಂಗ ಪಡಿಸೋಕೆ ಆಗಲ್ಲ ಎಂದರು.

ದೇವೇಗೌಡರನ್ನು ಭೇಟಿ ಮಾಡಿದ್ದು ರಾಜಕೀಯ ಕಾರಣಗಳಿಗೆ ಅಲ್ಲ. ಅವರ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ನನ್ನ ಯಂಗ್ ಶಾಸಕ ಪ್ರೀತಂಗೌಡ ಏನೋ ಉತ್ಸಾಹದಲ್ಲಿ ಮಾತನಾಡಿದ್ದಾರೆ. ನಾನು ಅವರ ಜತೆ ಮಾತನಾಡುವೆ ಎಂದರು.

ಬೊಮ್ಮಾಯಿ ಸರ್ಕಾರ ಜನತಾ ಪರಿವಾರದ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಳೆದ 15 ವರ್ಷದಿಂದ ನಾನು ಬಿಜೆಪಿಯಲ್ಲಿದ್ದೇನೆ. ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನೂ ಬಿಜೆಪಿಯ ಮುಖ್ಯಮಂತ್ರಿಯೂ ಹೌದು. ಎಚ್‍ಡಿಕೆ ಆ ರೀತಿಯ ಹೇಳಿಕೆ ನೀಡಬಾರದು. ನಾನು ಯಾಕೆ ಜನತಾ ಪರಿವಾರ ತೊರೆದೆ ಅನ್ನೋದು ಅವರಿಗೆ ತಿಳಿದಿದೆ ಎಂದು ಇದೇ ವೇಳೆ ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಶೇಖರ ಸಿಂಧೂರ ಸಾವಿನಿಂದ ಬಹಳ ದುಖಃವಾಗಿದೆ. ನಾನು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ವೈಯಕ್ತಿವಾಗಿಯೂ ನನಗೆ ಬಹಳ ನಷ್ಟವಾಗಿದೆ. ಶಿಗ್ಗಾಂವಿ-ಸವಣೂರು ಕ್ಷೇತ್ರದ ಅಭಿವೃದ್ದಿಗೆ ಬಗ್ಗೆ ಅವರು ಕನಸು ಕಂಡಿದ್ದರು. ಅವರ ಸಾವಿನಿಂದ ನನಗೆ ದುಃಖವಾಗಿದೆ ಎಂದು ಬೊಮ್ಮಾಯಿ ಸಿಂಧೂರ ಸಾವಿಗೆ ಸಂತಾಪ ಸೂಚಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು