ವಿಡಿಯೋ

ಸಾಂಪ್ರದಾಯಿಕವಾಗಿ ಜರುಗಿದ ನಂಜುಂಡೇಶ್ವರ ಸ್ವಾಮಿ ಮಿನಿ ರಥೋತ್ಸವ

ಕೊರೊನಾ ಭೀತಿ ಹಿನ್ನೆಲೆ ಕೇವಲ ಐದು ಮಂದಿ ಭಕ್ತರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು: ಇಂದು ನಡೆಯಬೇಕಿದ್ದ ನಂಜನಗೂಡಿನ ನಂಜುಂಡೇಶ್ವರ  ದೇವಾಲಯದ ಪಂಚ ಮಹಾರಥೋತ್ಸವ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರದ್ದಾಗಿದೆ.

ಆದರೂ ದೇವಾಲಯದ ಒಳಗೆ ಆಡಳಿತ ಮಂಡಳಿಯವರು ಸಾಂಪ್ರದಾಯಿಕವಾಗಿ ಶ್ರೀಸ್ವಾಮಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ್ದರು. ಹೀಗಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ಶನಿವಾರ ನೆರವೇರಿಸಲಾಯಿತು.

ದೊಡ್ಡ ತೇರಿನ ಬದಲು ಪುಟಾಣಿ ತೇರಿನ ಮೂಲಕ ರಥೋತ್ಸವ ನಡೆಸಲಾಯಿತು. ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸೇರುವ ಜಾಗದಲ್ಲಿ‌ ಕೇವಲ‌ 5 ಜನರು ಇದ್ದರು. ಈ ಹಿನ್ನೆಲೆಯಲ್ಲಿ ಅರ್ಚಕರು, ಕೆಲವು ಸಿಬ್ಬಂದಿ ಸೇರಿ ಸರಳ ಆಚರಣೆ ಮಾಡಿದರು.

ಮುಂಜಾನೆ 5.30ಕ್ಕೆ ದೇವಸ್ಥಾನದ ಹೊರ ಭಾಗದಲ್ಲಿ‌ ಪೂಜೆ ಸಲ್ಲಿಸಿ ರಥೋತ್ಸವ್ಕೆ ಚಾಲನೆ ನೀಡಲಾಯಿತು. ದೇವಾಲಯದ ಒಳ ಆವರಣದಲ್ಲೇ ಪುಟ್ಟ ರಥದಲ್ಲಿ ಉತ್ಸವ ಮೂರ್ತಿ ಪೂಜೆ ನಡೆಯಿತು.

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ ನಂಜನಗೂಡು ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಸರ್ಕಾರದ ವತಿಯಿಂದ ನಡೆಯುತ್ತಿದ್ದ ಗೌತಮ ಪಂಚ ರಥೋತ್ಸವ ರದ್ದಾಗಿದ್ದರಿಂದ ನಂಜನಗೂಡು ಯುವ ಬ್ರಿಗೇಡ್ ಯುವಕರು ಚಿಕ್ಕ ತೇರು ನಿರ್ಮಿಸಿ ದೇವಸ್ಥಾನದ ಸುತ್ತ ಎಳೆದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ