CrimeNEWSನಮ್ಮರಾಜ್ಯ

ಸಬ್ ರಿಜಿಸ್ಟ್ರಾರ್ ಚಲುವರಾಜ್ ಸೇರಿ ನಾಲ್ವರು ಸೇವೆಯಿಂದ ವಜಾ: ಆದೇಶ ಹೊರಡಿಸಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ, ಚಿಕ್ಕಮಗಳೂರು: ಕಂದಾಯ ಸಚಿವ ಆರ್. ಅಶೋಕ್‌ ಅವರ ಆಪ್ತ ಕಾರ್ಯದರ್ಶಿ’ ಗಂಗಾಧರ ಬಿ ಅವರ ವಿರುದ್ಧ ಹಣ ಬೇಡಿಕೆ ಮತ್ತು ಹಣ ಪಾವತಿಸಲು ನಿರಾಕರಿಸಿ ಬೆದರಿಕೆ ಹಾಕಿದ್ದರೆಂದು ಆರೋಪಿಸಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಎಚ್.ಎಸ್ ಚಲುವರಾಜ್ ಸೇರಿ 4 ಮಂದಿಯನ್ನು ಸೇವೆಯಿಂದ ವಜಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ ಉಪ ನೋಂದಣಿ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಚಲನ್‌ಗಳನ್ನು ತಿದ್ದಿ ಸರ್ಕಾರಕ್ಕೆ ನಷ್ಟ ಉಂಟುಮಾಡಿದ್ದ ಪ್ರಕರಣದಲ್ಲಿ ಇಬ್ಬರು ಸಬ್ ರಿಜಿಸ್ಟ್ರಾರ್ ಚಲುವರಾಜ್ ಮತ್ತು ಎಸ್.ಎನ್.ಪ್ರಭಾ ಅವರನ್ನು ವಜಾಗೊಳಿಸಲಾಗಿದೆ. ಇವರು 2005-06ರಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಚಲನ್‌ಗಳನ್ನು ತಿದ್ದಿ ಸರ್ಕಾರಕ್ಕೆ ನಷ್ಟ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದರು. ಇವರ ಜತೆಗೆ ನೆಲಂಮಂಗಲ ಎಸ್‌ಡಿಎ ಎ.ಸಿ. ಸುನಂದಾ, ಮಳವಳ್ಳಿಯ ಎಸ್‌ಡಿಎ ಲೀಲಾವತಿ ಸೇವೆಯಿಂದ ವಜಾಗೊಂಡಿದ್ದಾರೆ.

ಇವರು 2005 06ರಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಚಲನ್‌ಗಳನ್ನು ತಿದ್ದಿ ಸರ್ಕಾರಕ್ಕೆ ನಷ್ಟ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದರು. ನಿವೃತ್ತ ನ್ಯಾಯಾಧೀಶರಾದ ಬಿ.ರಂಗಸ್ವಾಮಿ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ವಿಚಾರಣೆ ವೇಳೆ ಪ್ರಭಾ 77 ಪ್ರಕರಣಗಳಲ್ಲಿ 6.36 ಲಕ್ಷ ರೂ., ಚಲುವರಾಜು 13 ಪ್ರಕರಣಗಳಲ್ಲಿ 1.78 ಲಕ್ಷ ರೂ. ಸುನಂದಾ 8 ಕೇಸಿನಲ್ಲಿ 62 ಸಾವಿರ ರೂ. ಹಾಗೂ ಲೀಲಾವತಿ 40 ಪ್ರಕರಣದಲ್ಲಿ 5.29 ಲಕ್ಷ ರೂ.ಗಳನ್ನು ಸರ್ಕಾರಕ್ಕೆ ನಷ್ಟ ಮಾಡಿರುವುದು ಬೆಳಕಿಗೆ ಬಂದಿತ್ತು.

ಚೆಲುವರಾಜು ಅವರು ಶೃಂಗೇರಿ ಉಪ-ರಿಜಿಸ್ಟ್ರಾರ್ ಆಗಿದ್ದಾಗ, ಕಂದಾಯ ಸಚಿವ ಆರ್ ಅಶೋಕ ಅವರ ಆಪ್ತ ಕಾರ್ಯದರ್ಶಿ’ ಗಂಗಾಧರ ಬಿ ಅವರ ವಿರುದ್ಧ ಹಣ ಬೇಡಿಕೆ ಮತ್ತು ಹಣ ಪಾವತಿಸಲು ನಿರಾಕರಿಸಿದಾಗ ಬೆದರಿಕೆ ಹಾಕಿದ್ದರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.

ಅವರನ್ನು ಸೇವೆಯಿಂದ ವಜಾಗೊಳಿಸಿದ್ದು ಚಲನ್ ಟ್ಯಾಂಪರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನವೆಂಬರ್ 13, 2006 ರಂದು ತನಿಖೆಗೆ ಆದೇಶಿಸಲಾಗಿತ್ತು. ನ್ಯಾಯಾಲಯದಲ್ಲಿ ಅಧಿಕಾರಿ, ನೌಕರರನ್ನು ಅಪರಾಧಿ ಎಂದು ಶಿಕ್ಷೆಯಾದ ಕಾರಣ ಅವರನ್ನುಸೇವೆಯಿಂದ ವಜಾ ಮಾಡಿರುವುದಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಕೆ.ಪಿ.ಮೋಹನ್ ರಾಜ್ ಆದೇಶಿಸ ಹೊರಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು