NEWSನಮ್ಮಜಿಲ್ಲೆಸಂಸ್ಕೃತಿ

ಸಮಾಜ ಏಕತೆಯಿಂದ ಸಾಗಲು ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಶಾಸ್ತ್ರೀಜಿ ದಾರಿದೀಪ: ಸಚಿವ ಕೆಎಚ್‌ಎಂ

ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜಯಂತಿ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಮಹಾತ್ಮಾ ಗಾಂಧೀಜಿಯವರ ಚಿಂತನೆ, ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಭಾರತ ದೇಶ ಕಂಡ ಅಪ್ರತಿಮ ನಾಯಕ.‌ ಸರಳ ವ್ಯಕ್ತಿತ್ವ ಹೊಂದಿದ್ದ ಮಹಾನ್ ವ್ಯಕ್ತಿಯಾಗಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.

ಬಯ್ಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕಿನ ದೇವನಹಳ್ಳಿ ಅಧ್ಯಕ್ಷರಾದ ಜಗನ್ನಾಥ್, ಕೃಷಿ ಸಮಾಜದ ಅಧ್ಯಕ್ಷರಾದ ರವಿ, ರಾಮಚಂದ್ರಪ್ಪ, ಲೋಕೇಶ್, ಮಂಜುನಾಥ್, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ನಗರಾಭಿವೃದ್ಧಿ ಯೋಜನ ನಿರ್ದೇಶಕರಾದ ರಮೇಶ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ