NEWS

ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಬಹುದು: ಸಚಿವ ಎಸ್.ಅಂಗಾರ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಿ ಬಳಕೆ ಮಾಡುವ ಆಸ್ಟ್ರೇಲಿಯಾದ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಉಪಯೋಗಿಸಲಾಗುತ್ತಿದೆ ಎಂದು ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಆಳಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು 10ಕ್ಕೂ ಹೆಚ್ಚು ದಿನಗಳ ಕಾಲ ಸಮುದ್ರದಲ್ಲೇ ಇರಬೇಕಾಗುತ್ತದೆ. ಆ ವೇಳೆ ಸಮುದ್ರದ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಒಂದು ವಾರದ ಬಳಕೆಗೆ ಬೇಕಾದ ಸಿಹಿ ನೀರನ್ನು ಹೋಗುವಾಗಲೇ ಬೋಟ್‍ನಲ್ಲಿ ಸಂಗ್ರಹಿಸಿ ಕೊಂಡೊಯ್ಯುತ್ತಿದ್ದರು.

ಆದರೆ ಇನ್ಮುಂದೆ ಈ ರೀತಿ ಕೊಂಡೊಯ್ಯುವ ಬದಲು ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಿ ಬಳಕೆ ಮಾಡಲು ಆಸ್ಟ್ರೇಲಿಯಾದ ಈ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದೆ. ಈ ರೀತಿ ಬೋಟ್‍ನಲ್ಲಿಯೇ ಉಪ್ಪು ನೀರನ್ನು ಸಿಹಿ ನೀರಾಗಿ ಫಿಲ್ಟರ್ ಮಾಡುವ ತಂತ್ರಜ್ಞಾನದ ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು ಎಂದು ತಿಳಿಸಿದರು.

ಇನ್ನು ಈ ತಂತ್ರಜ್ಞಾನ ಅಮೆರಿಕ, ಯುರೂಪ್‍ನಲ್ಲಿ ಈಗಾಗಲೇ ಬಳಕೆಯಲ್ಲಿದೆ. ಆಸ್ಟ್ರೇಲಿಯಾ ಮೂಲದ ರೆಯಾನ್ಸ್ ಎಂಬ ಕಂಪನಿ ಈ ಕಿಟ್‍ನ್ನು ತಯಾರಿಸುತ್ತಿದೆ. ಇಲ್ಲಿ ಬೋಟ್ ಸಂಚರಿಸುವಾಗಲೇ ಉಪ್ಪು ನೀರನ್ನು ಪೈಪ್ ಮೂಲಕ ಸಂಗ್ರಹಿಸಲಾಗುತ್ತೆ. ಪೈಪ್‍ನಿಂದ ಬಂದ ಉಪ್ಪು ನೀರು ಶುದ್ದೀಕರಿಸುವ ಯಂತ್ರದ ಒಳಗೆ ಪಂಪ್ ಆಗಿ ಬಳಿಕ ಫಿಲ್ಟರ್ ಆಗಿ ಸಿಹಿ ನೀರು ಇನ್ನೊಂದು ಪೈಪ್ ಮೂಲಕ ಹೊರ ಬರುತ್ತೆ.

ಈ ರೀತಿ ಗಂಟೆಗೆ 168 ಲೀಟರ್ ನೀರು ಫಿಲ್ಟರ್ ಆಗಲಿದ್ದು, ದಿನವೊಂದಕ್ಕೆ 2000 ಲೀ. ನೀರು ಫಿಲ್ಟರ್ ಆಗುತ್ತೆ. ಇದರಿಂದ ಸದ್ಯ ನೀರು ಸಂಗ್ರಹಿಸಿಡಲು ಬೋಟ್‍ನಲ್ಲಿ ಸ್ಥಳವಕಾಶ ಸಮಸ್ಯೆ ಜೊತೆ ಅಧಿಕ ಭಾರದ ಹೊರೆ ತಪ್ಪಿದಂತಾಗುತ್ತದೆ. ಮೀನುಗಾರರಿಗೆ ನಿತ್ಯ ಬಳಕೆಗೆ ಇದೇ ನೀರನ್ನು ಬಳಸಬಹುದಾಗಿದ್ದು, ಸಿಹಿ ನೀರು ಮುಗಿಯುತ್ತೆ ಎಂಬ ಆತಂಕವು ಇರೋದಿಲ್ಲ ಕಂಪನಿ ತಿಳಿಸಿದೆ.

ಈ ಯಂತ್ರಕ್ಕೆ 4.60 ಲಕ್ಷ ರೂ. ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುವ ನಿರ್ಧಾರ ಮಾಡಿದೆ. ಇದೀಗ ರಾಜ್ಯ ಸರ್ಕಾರವೂ ಬೋಟ್ ಮಾಲೀಕರಿಗೆ ಈ ಯಂತ್ರ ಅಳವಡಿಕೆಗೆ ವಿಶೇಷ ಅನುದಾನ ನೀಡುವ ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಇನ್ಮುಂದೆ ಮೀನುಗಾರರಿಗೆ ಸಿಹಿ ನೀರು ಸಮುದ್ರದಲ್ಲೇ ಲಭ್ಯವಾಗಲಿದ್ದು ಸಿಹಿ ನೀರಿನ ಆಭಾವ ತಪ್ಪಲಿದೆ ಎಂದು ಸಚಿವರು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು