NEWSನಮ್ಮಜಿಲ್ಲೆ

ಸ್ಯಾನಿಟೈಸರ್ ಸೇವನೆಯಿಂದ ಲಿವರ್‌ಗೆ ಹಾನಿ

ಬಹು ಅಂಗಾಂಗಕ್ಕೂ ತೊಂದರೆ l ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್‌ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್ ಮತ್ತು ಬಹು ಅಂಗಾಂಗಗಳ ವೈಫಲ್ಯವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಕೆಲವು ಯುವಕರು ಮತ್ತು ವ್ಯಕ್ತಿಗಳು ಸ್ಯಾನಿಟೈಸರ್‌ಗಳನ್ನು ಸೇವಿಸುತ್ತಿದ್ದಾರೆ ಎಂಬ ವರದಿಗಳು ಮಾಧ್ಯಮದಲ್ಲಿ ಪ್ರಸಾರವಾಗಿವೆ.

ಸ್ಯಾನಿಟೈಜರ್‌ದಲ್ಲಿ ಅಲ್ಕೋಹಾಲ್ ಮಾತ್ರ ಇರುವುದಿಲ್ಲ. ಇದು ಶೇ.95 ರಷ್ಟು ಇಥೈಲ್ ಅಲ್ಕೋಹಾಲ್, ಶೇ.0.125 ಹೈಡ್ರೋಜನ್ ಪೆರಾಕ್ಸೆöÊಡ್, ಶೇ.1.45 ರಷ್ಟು ಗ್ಲಿಸರಾಲ್ ಒಳಗೊಂಡಿರುತ್ತದೆ.   ಹೆಚ್ಚಿನ ಪ್ರಮಾಣದಲ್ಲಿ ಇಥೆನಾಲ್ ಇರುವುದರಿಂದ ಕುಡಿಯಲು ಇದು ಯಾವುದೇ ಕಾರಣಕ್ಕೂ ಯೋಗ್ಯವಲ್ಲ.

ಇದರ ಸೇವನೆಯಿಂದ ಅನ್ನನಾಳ, ಜಠರ, ಸಣ್ಣಕರಳು, ದೊಡ್ಡಕರಳು, ಪಿತ್ತಜನಕಾಂಗ (ಲೀವರ್)  ಮತ್ತು ಮೇದೋಜಿರಕ ಗ್ರಂಥಿಗಳಿಗೆ ತೀವ್ರವಾದ ಹಾನಿಯಾಗುತ್ತದೆ. ಪ್ರಾಣಹಾನಿಯಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾಶಸ್ತ್ರ ಚಿಕಿತ್ಸಕ ಡಾ: ಶಿವಕುಮಾರ್ ಮಾನಕರ ತಿಳಿಸಿದ್ದಾರೆ.

ಸ್ಯಾನಿಟೈಸರ್ ಹೊಟ್ಟೆಯಲ್ಲಿ ಹೋದರೆ ಅನ್ನನಾಳ ತೂತು ಬೀಳುತ್ತೆ, ಲೀವರ್‌ಗಳ ಕ್ರಿಯೆಗೂ ಧಕ್ಕೆ ಬರುತ್ತದೆ ಎಂದಿರುವ ಡಿಎಚ್‌ಒ, ಮನುಷ್ಯ ಸಾಯುವ ಪರಿಸ್ಥಿತಿ ಬರಬಹುದು, ಆದ್ದರಿಂದ ಸ್ಯಾನಿಟೈಜರ್  ಸೇವಿಸಬಾರದು. ಇದು ಕುಡಿಯುವ ವಸ್ತು ಅಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಸ್ಯಾನಿಟೈಸರ್ ಸೇವನೆ ಮಾಡುತ್ತಿರುವವರ ಬಗ್ಗೆ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ ವಾಟ್ಸ್ಪ್ ಸಂಖ್ಯೆಗಳಾದ 9449847646, 9449847641 ಗಳಿಗೆ ಮಾಹಿತಿ ನೀಡಬಹುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ